ವಿಶ್ವ ತಾಯಂದಿರ ದಿನ: ಎಚ್ಡಿಡಿ, ಎಚ್ಡಿಕೆ ಶುಭಾಶಯ
ಬೆಂಗಳೂರು, ಮೇ 10, ನಾಡಿನ ಸಮಸ್ತ ಜನತೆಗೆ ವಿಶ್ವ ತಾಯಂದಿರ ದಿನದ ಶುಭಾಯಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋರಿದ್ದಾರೆ.ಉತ್ತಮ ಸಮಾಜದ ನಿರ್ಮಾಣದಲ್ಲೂ ತಾಯಿಯ ಪಾತ್ರ ಮಹತ್ವದ್ದಾಗಿದೆ ಎಂದು ಗೌಡರು ಟ್ವೀಟ್ನಲ್ಲಿ ತಿಳಿಸಿದ್ದಾರೆ. ಅಮ್ಮ ಅನ್ನುವುದೇ ಜಗತ್ತಿನ ಅದ್ಬುತವಾದ ಶಬ್ದ. ನನಗಾಗಿ ದಿನನಿತ್ಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದ ನನ್ನ ತಾಯಿಯ ನೆನಪು ಸದಾ ನನ್ನ ಜೊತೆಗಿದೆ ಎಂದು ಹೇಳಿದ್ದಾರೆ.ಪ್ರತಿಯೊಬ್ಬರ ಜೀವನದಲ್ಲೂ ತಾಯಿಯ ಪಾತ್ರ ಅಪೂರ್ವವಾಗಿದ್ದು, ಉತ್ತಮ ಸಮಾಜದ ನಿರ್ಮಾಣದಲ್ಲೂ ತಾಯಿಯದ್ದೇ ಮಹತ್ವದ ಭೂಮಿಕೆ ಎಂದಿದ್ದಾರೆ.ಕುಮಾರಸ್ವಾಮಿ ಅವರು, ಇಂದು ವಿಶ್ವ ತಾಯಂದಿರ ದಿನ. ಪ್ರೀತಿ, ಮಮತೆ, ತ್ಯಾಗಕ್ಕೆ ಈ ದಿನ ಸಂಕೇತ. ಆದರೆ, ತಾಯ್ತನ ಅಜರಾಮರ. ನನ್ನ ವ್ಯಕ್ತಿತ್ವದ ಮೇಲೆ ನನ್ನಮ್ಮನ ಪ್ರಭಾವ ಗಾಢವಾಗಿದೆ. ಎಲ್ಲರನ್ನೂ ಪ್ರೀತಿಯಿಂದ ಕಾಣುವ, ಬಡವರಿಗೆ ಮರುಗುವ, ಕಷ್ಟಕ್ಕೆ ಕರಗುವ ಆಕೆಯ ಗುಣಗಳು ನನ್ನನ್ನು ರೂಪಿಸಿವೆ. ನನ್ನಮ್ಮನಿಗೆ ಹಾಗೂ ವಿಶ್ವದ ಮಾತೃ ಹೃದಯಗಳಿಗೆ ನನ್ನ ಶುಭಾಶಯಗಳು ಎಂದು ಕುಮಾರಸ್ವಾಮಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 