ಭವನ ಕಮಗಾರಿಗೆ ಪೂಜೆ
ರಾಯಬಾಗ 25: ಮತಕ್ಷೇತದ ಎಲ್ಲ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಗಳ ಸಮುದಾಯದ ಜನರ ಅನುಕೂಲಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ಭವನಗಳನ್ನು ನಿಮರ್ಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಬುಧವಾರ ತಾಲೂಕಿನ ಭೆಂಡವಾಡ ಮತ್ತು ದೇವನಕಟ್ಟೆ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಯೋಜನೆಯಡಿ ಮಂಜೂರಾದ ತಲಾ 12 ಲಕ್ಷರೂ. ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಭವನಗಳ ನಿಮರ್ಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಭವನಗಳನ್ನು ಸಾಂಸ್ಕೃತಿಕ ಚಟುವಟಿಕೆ, ಮದುವೆ, ಮುಂಜಿ ಸೇರಿದಂತೆ ಒಳ್ಳೆ ಕಾರ್ಯಗಳಿಗೆ ಉಪಯೋಗಿಸಿಕೊಳ್ಳಬೇಕು ಮತ್ತು ಭವನಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಸೂಚಿಸಿದರು.
ಇಂಚಗೇರಿ ಮಠದ ಪ್ರಭು ಮಹಾರಾಜ, ಜಿ.ಪಂ.ಸದಸ್ಯ ನಿಂಗಪ್ಪ ಪಕಾಂಡಿ, ಜಿ.ಪಂ.ಅಭಿಯಂತರರಾಜೇಶಡಂಗ, ಸದಾಶಿವ ಘೋರ್ಪಡೆ, ಸದಾನಂದ ಹಳಿಂಗಳಿ, ರೇವಣು ಶಿವಾಪೂರೆ, ಬಸವರಾಜ ಡೊಣವಾಡೆ, ಈಶ್ವರ ನಿಂಬಾಳ್ಕರ್, ಸದಾಶಿವ ಬಂಡಿ, ಸದಾಶಿವ ಹುಂಜ್ಯಾಗೋಳ, ಗಿರೀಪ್ಪ ನಾಯಿಕ, ಮಾರುತಿ ನಾಯಿಕ, ಕಲ್ಲಪ್ಪ ಮೇಗಾಡೆ, ಸಂಗಪ್ಪ ಬೆನ್ನಾಳೆ, ಯಲ್ಲಾಲಿಂಗ ನಾಯಿಕ, ಲಲಿತಾ ಸಣ್ಣಕ್ಕಿ, ಪಾರವ್ವ ಮಾಂಗ, ಸಾವಂತ ನಾಯಿಕ ಸೇರಿದಂತೆಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 