ಶಕ್ತಿ ಯೋಜನೆ ಸಂಭ್ರಮದಲ್ಲಿ ಬನಹಟ್ಟಿ-ಬೆಳಗಾವಿ ಬಸ್ಗೆ ಪೂಜೆ ಸಲ್ಲಿಕೆ
Worship of Banahati-Belgaum bus in celebration of Shakti Yojana
ಶಕ್ತಿ ಯೋಜನೆ ಸಂಭ್ರಮದಲ್ಲಿ ಬನಹಟ್ಟಿ-ಬೆಳಗಾವಿ ಬಸ್ಗೆ ಪೂಜೆ ಸಲ್ಲಿಕೆ
ರಾಯಬಾಗ, 14 ; ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. 500 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡಿ, ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದು ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಹೇಳಿದರು.
ಸೋಮವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಬನಹಟ್ಟಿ-ಬೆಳಗಾವಿ ಬಸ್ಗೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಮಾತನಾಡಿದ ಅವರು, ಎಲ್ಲ ವರ್ಗದ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆದು, ರಾಜ್ಯಾದ್ಯಾಂತ ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಸರ್ಕಾರದ ಕಾರ್ಯಕ್ಕೆ ಎಲ್ಲ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಕಾಂಗ್ರೆಸ್ ಕಾರ್ಯಕರ್ತರು ಬಸ್ನ್ನು ಸಿಂಗರಿಸಿ, ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ತಹಶೀಲ್ದಾರ ಸುರೇಶ ಮುಂಜೆ, ತಾ.ಪಂ.ಇಒ ಸುರೇಶ ಕದ್ದು, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ಶಿವನಗೌಡ ಪಾಟೀಲ, ಬಾಹುಸಾಹೇಬ ಪಾಟೀಲ, ಅರ್ಜುನ ಬಂಡಗರ, ಹಾಜಿ ಮುಲ್ಲಾ, ಫಾರೂಕ ಮೊಮಿನ, ಜ್ಯೋತಿ ಕೆಂಪಟ್ಟಿ, ದೀಲೀಪ ಜಮಾದಾರ, ತಮ್ಮಣ್ಣ ನಾಯಿಕವಾಡಿ, ಅಣ್ಣಪ್ಪ ಭೂವಿ, ಮಾರುತಿ ನಾಯಿಕ, ಬಸವರಾಜ ಮರ್ದಿ, ಕಿರಣ ಕಾಂಬಳೆ, ಶ್ರವಣ ಕಾಂಬಳೆ, ನಿರ್ಮಲಾ ಪಾಟೀಲ, ಶೈಲಜಾ ಕರಿಭೀಮಗೊಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 