ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ

ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ   Wrestling tournament at the district stadium


ಹಾವೇರಿ 28 :   ಯುಗಾದಿ ಹಬ್ಬದ ಪ್ರಯುಕ್ತ ನಗರದ ಶ್ರೀ ಪುರಸಿದ್ದೇಶ್ವರ ದೇವಸ್ಥಾನದ ರಥೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ  ನಗರದ ಶ್ರೀ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿಗಳು ಜರುಗಿದೆವು.  ಕಾರ್ಯಕ್ರಮವನ್ನು ಹೊಟೆಲ್ ಉದ್ದಿಮೆಗಳಾದ  ಪ್ರಕಾಶ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಕಮಿಟಿ ಅಧ್ಯಕ್ಷರಾದ  ಗುರಣ್ಣ ಸೀಮಿಗೇರಿ, ನಗರಸಭೆ ಮಾಜಿ ಉಪಾಧ್ಯಕ್ಷರಾದ  ಮಲ್ಲಿಕಾರ್ಜುನ ಸಾತೇನಹಳ್ಳಿ ಮುಖಂಡರಾದ  ಬೆಟ್ಟಪ್ಪ ಕುಳೇನೂರ, ಶಿಬಸಪ್ಪಾ ಜಾಬಿನ, ಕಿಶೋರಕುಮಾರ ಖಂಡೇಲವಾಲ,ಚಂದ್ರು ಕುಮಾರ ಗದಗಿ, ಶಿವಲಿಂಗಪ್ಪ ಕಲ್ಯಾಣಿ, ವಿಜಯಕುಮಾರ ಚಿನ್ನಿಕಟ್ಟಿ, ರಾಜು ತಟ್ಟಿಪಟಿ,ಕುಸ್ತಿ ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು.