ಯಡೂರ: ಭಾರತೀಯ ಸೈನಿಕರ ಯಶಸ್ಸಿಗೆ ಮಹಾಮೃತ್ಯುಂಜಯ ಹೋಮ
Yadoor: Mahamrityunjaya Homa for the success of Indian soldiers
ಚಿಕ್ಕೋಡಿ 10: ಪಾಕಿಸ್ತಾನ ವಿರುದ್ಧ ಯುದ್ಧದ ಗೆಲುವಿಗಾಗಿ ಭಾರತೀಯ ಸೈನಿಕರಿಗಾಗಿ ಯಡೂರ ಗ್ರಾಮದ ವೀರಭದ್ರೇಶ್ವರ ಗರ್ಭಗುಡಿಯ ಮುಂಭಾಗದಲ್ಲಿ ಮಹಾಮೃತ್ಯುಂಜಯ ಹೋಮ ಹಾಗೂ ಜಯಾದಿ ಹೋಮವನ್ನು ನೆರವೇರಿಸಿದರು.
ಭಾರತ ಹಾಗೂ ಪಾಕಿಸ್ತಾನ ದೇಶಗಳ ಮಧ್ಯೆ ಸಮರ ಪ್ರಾರಂಭವಾಗಿದೆ. ಭಾರತದ ಸೈನಿಕರಿಗೆ ಯಾವುದೇ ರೀತಿಯಾದ ತೊಂದರೆ ಆಗಬಾರದು. ಅವರ ಜೀವಕ್ಕೆ ಆಪತ್ತು ಬರಬಾರದು ಎನ್ನುವ ಉದ್ದೇಶದಿಂದ ಸಿದ್ದಲಿಂಗೇಶ್ವರ ಗುರುಕುಲ ಪಾಠಶಾಲೆಯ ಮುಖ್ಯೋಪಾಧ್ಯಾಯ ಶ್ರೀಶೈಲ ಶಾಸ್ತ್ರಿಗಳ ನೇತೃತ್ವದಲ್ಲಿ ಪಾಠಶಾಲೆಯ ಮಕ್ಕಳು, ವೇದ ಪಂಡಿತರು ಸೇರಿಕೊಂಡು ಜಯಾಧಿ ಹೋಮ ಹಾಗೂ ಮಹಾಮೃತ್ಯುಂಜಯ ಹೋಮವನ್ನು ಮಾಡಲಾಯಿತು. ಬಳಿಕ ಭಾರತೀಯ ಸೈನ್ಯಕ್ಕೆ ಜಯವಾಗಲಿ ಎಂದು ವೀರಭದ್ರೇಶ್ವರ ದೇವರಲ್ಲಿ ಪ್ರಾರ್ಥಿಸಿಕೊಳ್ಳಲಾಯಿತು.
ರೇಣುಕ ದೇವರು, ಅಭಿಷೇಕ ದೇವರು, ನರಸಗೌಡ ಕಮತೆ, ಅಡವಯ್ಯ ಅರಳಿಕಟ್ಟಿಮಠ, ಮನೋಹರ ಪುಠಾಣೆ, ಮುತ್ತು ಮಠದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 