ಯಡೂರ: ಭಾರತೀಯ ಸೈನಿಕರ ಯಶಸ್ಸಿಗೆ ಮಹಾಮೃತ್ಯುಂಜಯ ಹೋಮ
Yadoor: Mahamrityunjaya Homa for the success of Indian soldiers
ಚಿಕ್ಕೋಡಿ 10: ಪಾಕಿಸ್ತಾನ ವಿರುದ್ಧ ಯುದ್ಧದ ಗೆಲುವಿಗಾಗಿ ಭಾರತೀಯ ಸೈನಿಕರಿಗಾಗಿ ಯಡೂರ ಗ್ರಾಮದ ವೀರಭದ್ರೇಶ್ವರ ಗರ್ಭಗುಡಿಯ ಮುಂಭಾಗದಲ್ಲಿ ಮಹಾಮೃತ್ಯುಂಜಯ ಹೋಮ ಹಾಗೂ ಜಯಾದಿ ಹೋಮವನ್ನು ನೆರವೇರಿಸಿದರು.
ಭಾರತ ಹಾಗೂ ಪಾಕಿಸ್ತಾನ ದೇಶಗಳ ಮಧ್ಯೆ ಸಮರ ಪ್ರಾರಂಭವಾಗಿದೆ. ಭಾರತದ ಸೈನಿಕರಿಗೆ ಯಾವುದೇ ರೀತಿಯಾದ ತೊಂದರೆ ಆಗಬಾರದು. ಅವರ ಜೀವಕ್ಕೆ ಆಪತ್ತು ಬರಬಾರದು ಎನ್ನುವ ಉದ್ದೇಶದಿಂದ ಸಿದ್ದಲಿಂಗೇಶ್ವರ ಗುರುಕುಲ ಪಾಠಶಾಲೆಯ ಮುಖ್ಯೋಪಾಧ್ಯಾಯ ಶ್ರೀಶೈಲ ಶಾಸ್ತ್ರಿಗಳ ನೇತೃತ್ವದಲ್ಲಿ ಪಾಠಶಾಲೆಯ ಮಕ್ಕಳು, ವೇದ ಪಂಡಿತರು ಸೇರಿಕೊಂಡು ಜಯಾಧಿ ಹೋಮ ಹಾಗೂ ಮಹಾಮೃತ್ಯುಂಜಯ ಹೋಮವನ್ನು ಮಾಡಲಾಯಿತು. ಬಳಿಕ ಭಾರತೀಯ ಸೈನ್ಯಕ್ಕೆ ಜಯವಾಗಲಿ ಎಂದು ವೀರಭದ್ರೇಶ್ವರ ದೇವರಲ್ಲಿ ಪ್ರಾರ್ಥಿಸಿಕೊಳ್ಳಲಾಯಿತು.
ರೇಣುಕ ದೇವರು, ಅಭಿಷೇಕ ದೇವರು, ನರಸಗೌಡ ಕಮತೆ, ಅಡವಯ್ಯ ಅರಳಿಕಟ್ಟಿಮಠ, ಮನೋಹರ ಪುಠಾಣೆ, ಮುತ್ತು ಮಠದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 