ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ
Yadoor Veerabhadreshwara Temple flooded
ಮಾಂಜರಿ 23: ದಕ್ಷಿಣದ ಕಾಶೀ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ ಹಿನ್ನೆಲೆಯಲ್ಲಿ ಭಕ್ತರು ಬಾಗಿಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಇವತ್ತು ಶ್ರಾವಣ ಮಾಸದ ಕೊನೆಯ ಅಮವಾಸ್ಯೆ ಹಿನ್ನೆಲೆಯಲ್ಲಿ ವೀರಭದ್ರೇಶ್ವರ ದೇವರ ದರ್ಶನ ಪಡೆಯಲು ಕರ್ನಾಟಕ, ಮಹಾರಾಷ್ಟ್ರದ, ಆಂದ್ರ್ರದೇಶದ ಸೇರಿದಂತೆ ವಿವಿಧ ಭಾಗಗಳಿಂದ ದರ್ಶನ ಪಡೆಯಲು ಆಗಮಿಸುತ್ತಾರೆ. ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಭಕ್ತರು ಪೂರ್ವ, ಉತ್ತರದ ಬಾಗಿಲು ಹಾಗೂ ದೇವಸ್ಥಾನ ಹಿಂಭಾಗದಲ್ಲಿ ನಿಂತು ದರ್ಶನವನ್ನು ಪಡೆಯುತ್ತಿದ್ದಾರೆ. ಮಂಜಾಗೃತಾ ಕ್ರಮವಾಗಿ ಭಕ್ತರು ದೇವಸ್ಥಾನದ ಒಳಗಡೆ ಪ್ರವೇಶಿಸಬಾರದೆಂದು ಎಲ್ಲ ಬಾಗಿಲುಗಳನ್ನು ಬಂದ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ದೇವಸ್ಥಾನದ ಕಟ್ಟಡಗಳ ಸೈಟ್ ಇನಚಾರ್ಜ ಸುನೀಲ ಬಿರದೆ ಮಾತನಾಡಿ ನಿನ್ನೆ ಸಾಯಂಕಾಲ ಈ ದೇವಸ್ಥಾನ ಜಲಾವೃತಗೊಂಡಿದೆ. ಭಕ್ತರು ಸಾಕಷ್ಟು ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ. ವೀರಭದ್ರೇಶ್ವರ ದೇವರಿಗೆ ಜಲಾಭಿಷೇಕ ಆಗಿರುವುದು ಸಂತಸದ ಸುದ್ದಿ. ಭಕ್ತರು ದೂರದಿಂದ ನಿಂತು ದರ್ಶನ ಪಡೆಯಬೇಕೆಂದು ಮನವಿಯನ್ನು ಮಾಡಿಕೊಂಡರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 