ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ
Yadoor Veerabhadreshwara Temple flooded
ಮಾಂಜರಿ 23: ದಕ್ಷಿಣದ ಕಾಶೀ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ ಹಿನ್ನೆಲೆಯಲ್ಲಿ ಭಕ್ತರು ಬಾಗಿಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಇವತ್ತು ಶ್ರಾವಣ ಮಾಸದ ಕೊನೆಯ ಅಮವಾಸ್ಯೆ ಹಿನ್ನೆಲೆಯಲ್ಲಿ ವೀರಭದ್ರೇಶ್ವರ ದೇವರ ದರ್ಶನ ಪಡೆಯಲು ಕರ್ನಾಟಕ, ಮಹಾರಾಷ್ಟ್ರದ, ಆಂದ್ರ್ರದೇಶದ ಸೇರಿದಂತೆ ವಿವಿಧ ಭಾಗಗಳಿಂದ ದರ್ಶನ ಪಡೆಯಲು ಆಗಮಿಸುತ್ತಾರೆ. ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಭಕ್ತರು ಪೂರ್ವ, ಉತ್ತರದ ಬಾಗಿಲು ಹಾಗೂ ದೇವಸ್ಥಾನ ಹಿಂಭಾಗದಲ್ಲಿ ನಿಂತು ದರ್ಶನವನ್ನು ಪಡೆಯುತ್ತಿದ್ದಾರೆ. ಮಂಜಾಗೃತಾ ಕ್ರಮವಾಗಿ ಭಕ್ತರು ದೇವಸ್ಥಾನದ ಒಳಗಡೆ ಪ್ರವೇಶಿಸಬಾರದೆಂದು ಎಲ್ಲ ಬಾಗಿಲುಗಳನ್ನು ಬಂದ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ದೇವಸ್ಥಾನದ ಕಟ್ಟಡಗಳ ಸೈಟ್ ಇನಚಾರ್ಜ ಸುನೀಲ ಬಿರದೆ ಮಾತನಾಡಿ ನಿನ್ನೆ ಸಾಯಂಕಾಲ ಈ ದೇವಸ್ಥಾನ ಜಲಾವೃತಗೊಂಡಿದೆ. ಭಕ್ತರು ಸಾಕಷ್ಟು ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ. ವೀರಭದ್ರೇಶ್ವರ ದೇವರಿಗೆ ಜಲಾಭಿಷೇಕ ಆಗಿರುವುದು ಸಂತಸದ ಸುದ್ದಿ. ಭಕ್ತರು ದೂರದಿಂದ ನಿಂತು ದರ್ಶನ ಪಡೆಯಬೇಕೆಂದು ಮನವಿಯನ್ನು ಮಾಡಿಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 