ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ
Yadoor Veerabhadreshwara Temple flooded
ಮಾಂಜರಿ 23: ದಕ್ಷಿಣದ ಕಾಶೀ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ ಹಿನ್ನೆಲೆಯಲ್ಲಿ ಭಕ್ತರು ಬಾಗಿಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಇವತ್ತು ಶ್ರಾವಣ ಮಾಸದ ಕೊನೆಯ ಅಮವಾಸ್ಯೆ ಹಿನ್ನೆಲೆಯಲ್ಲಿ ವೀರಭದ್ರೇಶ್ವರ ದೇವರ ದರ್ಶನ ಪಡೆಯಲು ಕರ್ನಾಟಕ, ಮಹಾರಾಷ್ಟ್ರದ, ಆಂದ್ರ್ರದೇಶದ ಸೇರಿದಂತೆ ವಿವಿಧ ಭಾಗಗಳಿಂದ ದರ್ಶನ ಪಡೆಯಲು ಆಗಮಿಸುತ್ತಾರೆ. ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಭಕ್ತರು ಪೂರ್ವ, ಉತ್ತರದ ಬಾಗಿಲು ಹಾಗೂ ದೇವಸ್ಥಾನ ಹಿಂಭಾಗದಲ್ಲಿ ನಿಂತು ದರ್ಶನವನ್ನು ಪಡೆಯುತ್ತಿದ್ದಾರೆ. ಮಂಜಾಗೃತಾ ಕ್ರಮವಾಗಿ ಭಕ್ತರು ದೇವಸ್ಥಾನದ ಒಳಗಡೆ ಪ್ರವೇಶಿಸಬಾರದೆಂದು ಎಲ್ಲ ಬಾಗಿಲುಗಳನ್ನು ಬಂದ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ದೇವಸ್ಥಾನದ ಕಟ್ಟಡಗಳ ಸೈಟ್ ಇನಚಾರ್ಜ ಸುನೀಲ ಬಿರದೆ ಮಾತನಾಡಿ ನಿನ್ನೆ ಸಾಯಂಕಾಲ ಈ ದೇವಸ್ಥಾನ ಜಲಾವೃತಗೊಂಡಿದೆ. ಭಕ್ತರು ಸಾಕಷ್ಟು ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ. ವೀರಭದ್ರೇಶ್ವರ ದೇವರಿಗೆ ಜಲಾಭಿಷೇಕ ಆಗಿರುವುದು ಸಂತಸದ ಸುದ್ದಿ. ಭಕ್ತರು ದೂರದಿಂದ ನಿಂತು ದರ್ಶನ ಪಡೆಯಬೇಕೆಂದು ಮನವಿಯನ್ನು ಮಾಡಿಕೊಂಡರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 