ಯರಗಟ್ಟಿ, 09 : ಸಮೀಪದ ಮುನವಳಿ ಪಟ್ಟಣದ ಶ್ರೀ ಮುರುಘರಾಜೇಂದ್ರ ಯೋಗವಿದ್ಯಾ ಕೇಂದ್ರ ಸಂಚಾಲಿತ ಶ್ರೀ ಚನ್ನಬಸವ ಮಹಾಸ್ವಾಮೀಜಿ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ಮಹಾ ವಿದ್ಯಾಲಯದ ಆವರಣದಲ್ಲಿ ಮೇ. 10 ರಂದು ಮುಂಜಾನೆ 9.30 ಗಂಟೆಗೆ ಮೆಹಂದಿ ಹಾಗೂ ರಂಗೋಲಿ ಸ್ಪರ್ಧೆ ಶ್ರೀ ಮುರುಘೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜರುಗಲಿದೆ. ಆಡಳಿತ ಮಂಡಳಿಯ ಪದಾಧಿಕಾರಿಗಳು, ಇತರರು ಪಾಲ್ಗೊಳ್ಳಲಿದ್ದಾರೆ.