ಯರಗಟ್ಟಿ: ರೈತ ಸಂಪರ್ಕ ಕೇಂದ್ರದಿಂದ ಬೀಜ ವಿತರಣೆ
ಲೋಕದರ್ಶನ ವರದಿ
ಯರಗಟ್ಟಿ 12: ಇಲ್ಲಿನ ಕೃಷಿ ಉತ್ಪನ್ ಮಾರುಕಟ್ಟೆ ಆವರಣದಲ್ಲಿ ಸೋಮವಾರ ರೈತ ಸಂಪರ್ಕ ಕೇಂದ್ರದಿಂದ 2019-20ನೇ ಸಾಲಿನ ಮುಂಗಾರು ಹಂಗಾಮಿನ ರೈತರಿಗೆ ರಿಯಾಯಿತಿ ದರದಲ್ಲಿ ಜಿ.ಪಂ.ಸದಸ್ಯ ಅಜೀತಕುಮಾರ ದೇಸಾಯಿ ಬೀಜ ವಿತರಣೆ ಮಾಡಿದರು.
ಈ ಸಂಧರ್ಭದಲ್ಲಿ ಕೃಷಿ ಅಧಿಕಾರಿ ಎಮ್.ಎಸ್.ಬಿಚಗುಪ್ಪಿ ಮಾತನಾಡಿ ಮುಂಗಾರು ಹಂಗಾಮಿನ ಬೀತ್ತನೆ ಬೀಜಗಳು ಎಲ್ಲ ರೈತರಿಗೆ ತಲುಪುವಷ್ಟು ಬೀಜ ಇದ್ದು ಯರಗಟ್ಟಿ ಹೋಬಳಿ ಮಟ್ಟದ ಎಲ್ಲ ಗ್ರಾಮಗಳ ರೈತರು ಬೀಜಗಳನ್ನು ಖರೀದಿಸಬೇಕು ಮತ್ತು ಖರೀದಿಗಾಗಿ ಪ್ರತಿಯೊಬ್ಬರೂ ಆಧಾರ ಕಾಡರ್್ ಝರಾಕ್ಷ, ಬ್ಯಾಂಕ್ ಪಾಸ್ಬುಕ್ ಝರಾಕ್ಷ, ಒಂದು ಭಾವಚಿತ್ರ, ಖಾತೆ ಉತಾರ, ಮೋಬೈಲ್ ನಂಬರ ತರಬೇಕೆಂದು ಹೇಳಿದರು.
ಈ ಸಂಧರ್ಭದಲ್ಲಿ ಗ್ರಾ.ಪಂ.ಅದ್ಯಕ್ಷೆ ಕಸ್ತೂರಿ ಕಡೆಮನಿ, ತಾ.ಪಂ.ಸದಸ್ಯೆ ಮಂಜುಳಾ ಕರಿಗೊಣ್ಣವರ, ಎಪಿಎಮ್ಸಿ ಮಾಜಿ ಉಪಾದ್ಯಕ್ಷ ಚಂದ್ರು ಅಳಗೋಡಿ, ಆತ್ಮ ಸಿಬ್ಬಂದಿ ಉಮೇಶ ಯರಗಟ್ಟಿ, ಗಂಗಪ್ಪ ಹೂಲಿಕಟ್ಟಿ, ಅಪ್ಪಣ್ಣ ರವಿ ಎಸ್.ಡಿ.ಕೆಂಪಾರ, ಆರ್.ಬಿ.ದಾಸರ, ಬಸವರಾಜ ದಳವಾಯಿ, ಮಂಜುನಾಥ ಮುಂಡೇಶ, ವಿಜಯ ಚಿಕ್ಕೋಡಿ, ಹನಂತ ತಳವಾರ, ತುಕಾರಾಮ ಕಮತಗಿ, ರುದ್ರಪ್ಪ ಮಾದರ, ಯರಗಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 