ವರಿಷ್ಠರ ಮುಂದೆ ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿ ಬೇಡಿಕೆ: ಯತ್ನಾಳ
Yeddyurappa's family free BJP demand before seniors: Yatnal
ವಿಜಯಪುರ 03: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಆಯ್ಕೆ ವಿಷಯವಾಗಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ಮಂಗಳವಾರ ದೆಹಲಿಗೆ ನಮ್ಮ ತಂಡ ತೆರಳುತ್ತಿರುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕುಟುಂಬ ರಾಜ್ಯದಲ್ಲಿ ಸಾಕಷ್ಟು ಲೂಟಿ ಮಾಡಿದೆ, ನಕಲಿ ಸಹಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಶಾಮೀಲಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಮುಗಿಸುವ ಕೆಲಸ ವಿಜಯೇಂದ್ರ ಮಾಡುತ್ತಿದ್ದಾರೆ’ ಎಂಬುದನ್ನು ವರಿಷ್ಠರ ಗಮನಕ್ಕೆ ತರಲಾಗುವುದು’ ಎಂದರು.
‘ಯಡಿಯೂರಪ್ಪ ಕುಟುಂಬದಿಂದ ಬಿಜೆಪಿಯನ್ನು ಸಂಪೂರ್ಣ ಮುಕ್ತ ಮಾಡಿ, ಹಿಂದುತ್ವಪರ ಹಾಗೂ ಭ್ರಷ್ಟಾಚಾರ ರಹಿತ ನಾಯಕತ್ವವನ್ನು ಕರ್ನಾಟಕಕ್ಕೆ ಕೊಡಿ’ ಎಂಬ ಮೂರು ಪ್ರಮುಖ ಬೇಡಿಕೆಗಳನ್ನು ವರಿಷ್ಠರ ಮುಂದೆ ಇಡಲಾಗುವುದು’ ಎಂದರು.
ಬಿಜೆಪಿಯಲ್ಲಿ ತಟಸ್ಥ ಇದ್ದವರು ಇದುವರೆಗೆ ಎರಡೂ ಕಡೆ ಆಟ ಆಡುತ್ತಿದ್ದರು. ಇದೀಗ ನಮ್ಮೊಂದಿಗೆ ಸೇರಿಕೊಂಡಿದ್ದಾರೆ. ರಾಜ್ಯದ ಸಂಸದರು ನಮ್ಮೊಂದಿಗೆ ಸೇರಿದ್ದಾರೆ. ವಿಜಯೇಂದ್ರ ವಿರುದ್ಧ ಪಕ್ಷದ ಹೈಕಮಾಂಡ್ಗೆ ದೂರು ನೀಡಲು ಇದೀಗ ದೊಡ್ಡ ತಂಡವೇ ಸಿದ್ಧವಾಗಿದೆ ಎಂದು ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 