ಏ.14ರವರೆಗೆ ರಾಜ್ಯದಲ್ಲಿ ಮದ್ಯಮಾರಾಟ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ
ಬೆಂಗಳೂರು, ಏ.1, ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂಧ ಏಪ್ರಿಲ್ 14ರವರೆಗೆ ರಾಜ್ಯದಲ್ಲಿ ಮದ್ಯಮಾರಾಟ ಮಾಡಲು ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಲಾಕ್ಡೌನ್ ಮುಗಿಯುವವರೆಗೂ ಮದ್ಯಪ್ರಿಯರು ಕಾಯಲೇಬೇಕಾಗಿದೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯಕ್ಕಾಗಿ ದೆಹಲಿಗೆ ಯಾರು ಹೋಗಿದ್ದಾರೋ ಅವರೇ ಮುಂದೆ ಬಂದರೆ ಒಳ್ಳೆಯದು. ನಾವು ನಿಮ್ಮನ್ನು ಹುಡುಕುವುದು ತಪ್ಪಲಿದೆ. ಏಪ್ರಿಲ್ 14ವರೆಗೆ ಮದ್ಯದಂಗಡಿ ಬಂದ್ ಇರಲಿದೆ. ಯಾರಿಗೆಲ್ಲ ಎಣ್ಣೆ ಕುಡಿಯಬೇಕೆಂಬುದಿದೆಯೋ ಅವರು ಅಲ್ಲಿಯವರೆಗೆ ಕಾಯಲೇಬೇಕು ಎಂದು ನಗೆಚಟಾಕಿ ಹಾರಿಸಿದರು.ಮುಖ್ಯಮಂತ್ರಿಗಳ ಮಾತಿಗೆ ದನಿಗೂಡಿಸಿದ ಸಚಿವ ಆರ್.ಅಶೋಕ್, ಲಾಕ್ಡೌನ್ ಮುಗಿಯುವವರೆಗೂ ಎಣ್ಣೆ ನಿಮ್ದು ಊಟ ಮಾತ್ರ ನಮ್ದು ಎಂದು ಪರಿಹಾಸ್ಯ ಮಾಡಿದರು.ಕೇರಳದಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ಮದ್ಯಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಮದ್ಯ ಸಿಗದೇ ಐವರು ಮೃತಪಟ್ಟಿದ್ದು, ಮದ್ಯದಂಗಡಿ ತೆರೆಯುವಂತೆ ಮದ್ಯಪ್ರಿಯರು ಆಗ್ರಹಿಸಿದ್ದರು. ಈ ಬಗ್ಗೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿರುವುದಾಗಿ ಅಬಕಾರಿ ಸಚಿವ ನಾಗೇಶ್ ಹೇಳಿದ್ದರು. ಇಂದು ಯಡಿಯೂರಪ್ಪ ಲಾಕ್ಡೌನ್ ಮುಗಿಯುವವರೆಗೂ ಮದ್ಯದಂಗಡಿ ತೆರೆಯಲಾಗದು ಎಂದು ಸ್ಪಷ್ಟಪಡಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 