ಸವದತ್ತಿಯಲ್ಲಿ ಸಂಭ್ರಮದ ಯೋಗ ದಿನಾಚರಣೆ
Yoga Day celebrated in Savadatti
ಸವದತ್ತಿ : ನಗರದ ಪದಕಿಪುರಂ ಶಂಕರ ಮಠದಲ್ಲಿ ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಾ. ನಯನಾ ಭಸ್ಮೆ ಅವರು, “ನಿತ್ಯ ಯೋಗದಿಂದ ಸದಾ ನಿರೋಗಿಯಾಗಿರಬಹುದು. ಆರೋಗ್ಯವೇ ನಿಜವಾದ ಭಾಗ್ಯ; ಅದಕ್ಕೆ ಯೋಗವೇ ಮೂಲಮಂತ್ರ. ಪ್ರತಿಯೊಬ್ಬರೂ ದಿನನಿತ್ಯ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು. ಯೋಗದಿಂದ ದೇಹ ಆರೋಗ್ಯವಾಗಿದ್ದು, ರೋಗಗಳು ಹತ್ತಿರ ಸುಳಿಯುವುದಿಲ್ಲ. ಮಾನಸಿಕ ಹಾಗೂ ದೈಹಿಕ ಸಮತೋಲನಕ್ಕೆ ಯೋಗ ಅತ್ಯಗತ್ಯ,” ಎಂದು ತಿಳಿಸಿದರು.
ಸೀಮಾ ವನಕಿ ಮಾತನಾಡಿ, ಯೋಗವು ಕೇವಲ ವ್ಯಾಯಾಮವಲ್ಲ; ಅದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಯೋಗ ಗುರು ಬಾಬು ಲಮಾಣಿ ಅವರನ್ನು ಕಾರ್ಯಕ್ರಮದ ಆಯೋಜಕರು ಹಾಗೂ ಗಣ್ಯರು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪಲ್ಲವಿ ಪದಕಿ, ಪಾರ್ವತಿ ಕಾಂತಿಮಠ, ಹಸೀನಾ ಯಲಿಗಾರ, ಸುಮಿತ್ರಾ ಕಾರದಗಿ, ಮೇಘಾ ಬೆಂಡೆಗುಂಬಳ, ಪ್ರತಿಮಾ ಲಾಳಗೆ, ಮೀನಾಕ್ಷಿ ವಡಕನ್ನವರ, ಸುನೀತಾ ಇಜಂತಕರ, ಕೀರ್ತಿ ಬಾಗಲಕೋಟ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 