ಯೋಗದಿಂದ ರೋಗರುಜಿನಗಳಿಂದ ದೂರ ಇರಬಹುದು: ಅಗ್ನಿ
Yoga can keep you away from diseases: Agni
ಸಿಂದಗಿ 22: ಹಲವು ಶತಮಾನಗಳ ಹಿಂದೆಯೇ ಭಾರತದ ಋಷಿಮುನಿಗಳು ವಿಶ್ವಕ್ಕೆ ಯೋಗದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಆದರೆ ಇಂದಿನ ಯುವ ಪೀಳಿಗೆ ಆಧುನಿಕ ಜೀವನ ಶೈಲಿಯನ್ನು ಅಳವಡಿಸಿಕೊಂಡಿರುವುದರಿಂದ ಯೋಗದಿಂದ ದೂರ ಉಳಿಯುತ್ತಿದ್ದಾರೆ ಎಂದು ತಾಪಂ ಇಒ ರಾಮು ಅಗ್ನಿ ವಿಷಾದವ್ಯಕ್ತಪಡಿಸಿದರು.
ಸಿಂದಗಿ ತಾಲೂಕಿನ ಬಂದಾಳ ಗ್ರಾಪಂ ವ್ಯಾಪ್ತಿಯ ಓತಿಹಾಳ ಗ್ರಾಮದಲ್ಲಿರುವ ಅಮೃತ ಸರೋವರ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವವನ್ನು ವಹಿಸಿಕೊಂಡು ಮಾತನಾಡಿದ ಅವರು, ಯೋಗದಿಂದ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ. ದೈಹಿಕವಾಗಿ, ಮಾನಸಿಕವಾಗಿ ಸ್ಥೈರ್ಯ ಬರುವುದಲ್ಲದೇ ಅದರಿಂದ ಹಲವು ರೋಗರುಜಿನಗಳಿಂದ ದೂರ ಇರಬಹುದು ಎಂದು ತಿಳಿಸಿದರು.
ಪ್ರೌಢಶಾಲೆ ದೈಹಿಕ ಶಿಕ್ಷಕಿ ಸವಿತಾ ಇಂಗಳಗಿ ಅವರು ಹಠಸೂರ್ಯ ನಮಸ್ಕಾರ, ಅಯ್ಯಂಗಾರ್ ಸೂರ್ಯ ನಮಸ್ಕಾರ ಮತ್ತು ಅಷ್ಟಾಂಗ ಸೂರ್ಯ ನಮಸ್ಕಾರಗಳ ಉಪಯುಕ್ತ ಮಾಹಿತಿ ಮತ್ತು ಯೋಗಾಭ್ಯಾಸ ಮಾಡಿಸಿದರು.
ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಗ್ರಾಪಂ ಅಧ್ಯಕ್ಷ ಯಮನಪ್ಪ ಹೊಸಮನಿ, ಐಇಸಿ ಸಂಯೋಕ ಭೀಮರಾಯ ಚೌಧರಿ, ಕಾರ್ಯದರ್ಶಿ ರಾಜಾಸಾಬ ಮುಜಾವರ, ರಾಜಶೇಖರ ಹಿರೇಕುರುಬರ, ರಾಜು ವಡ್ಡರ ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 