ಯೋಗವು ಸಂತೋಷದ ಹೆಬ್ಬಾಗಿಲು: ಶ್ರೀಶೈಲಗೌಡ
Yoga is the gateway to happiness: Srisailagowda
ಸಿಂದಗಿ 22: ಯೋಗವು ಸಂತೋಷದ ಹೆಬ್ಬಾಗಿಲು. ಆರೋಗ್ಯಕರ ಮನಸ್ಸಿನ ರಹಸ್ಯವಾಗಿದೆ. ಆತ್ಮಸ್ಥೈರ್ಯ ವೃದ್ಧಿ, ಮಾನಸಿಕ ನೆಮ್ಮದಿ, ಉತ್ತಮ ಆರೋಗ್ಯಕ್ಕಾಗಿ ನಮ್ಮ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಯೋಗಭ್ಯಾಸವನ್ನು ಅಳವಡಿಸಿಕೊಳ್ಳಬೇಕೆಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.
ಸಿಂದಗಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ಎ.ಪಿ.ಎಮ್.ಸಿ ಯೋಗಾ ಗ್ರೂಪ್ ವತಿಯಿಂದ ಆಯೋಜಿಸಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪತಂಜಲಿ ಮಹಾಮುನಿಗಳಿಂದ ರಚನೆಯಾದ ಜಗತ್ತಿನ ಅತ್ಯುತ್ತಮ ವಿದ್ಯೆ ಎಂದರೆ ಯೋಗಶಾಸ್ತ್ರ. ಭಾರತದ ಈ ಪುರಾತನ ವಿದ್ಯೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹಾಗೂ ಜಗತ್ತಿಗೆ ಯೋಗ ದಿನಾಚರಣೆಯನ್ನು ಪರಿಚಯಿಸಿದ ಕೀರ್ತಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿರುವ ಯೋಗ ಶಾರೀರಿಕ-ಮಾನಸಿಕ ಸಮತೋಲನಕ್ಕೆ ಉತ್ತಮ ಮಾರ್ಗ ಎಂದರು.
ಬಿ.ಜಿ.ಪಾಟೀಲ, ಡಾ.ಚಿದಾನಂದ ಅರಳಗುಂಡಗಿ, ಮಲ್ಲಿಕಾರ್ಜುನ ವಾರದ, ಬಿ.ಜಿ.ಕಕ್ಕಳಮೇಲಿ, ಸಂಗಮೇಶ ಕುಂಬಾರ, ಸಿದ್ದಣ ಪುಜಾರಿ, ಡಾ.ಪ್ರಕಾಶ ಉಪ್ಪಿನ, ಶಂಕರಗೌಡ ಬನ್ನೆಟ್ಟಿ, ಎಸ್.ಎಮ್.ಯಳಮೇಲಿ, ವಿಜಯಕುಮಾರ ಪತ್ತಾರ, ಹಾಗೂ ಎಪಿಎಮ್ಸಿ ಯೋಗ ಗ್ರೂಪ್ ಸದಸ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 