ರೋಟರಿ ಕ್ಲಬ್ನಿಂದ ಯೋಗ ಗುರು ಉದ್ದಂಡಿಯವರಿಗೆ ಸನ್ಮಾನ
ಲೋಕದರ್ಶನ ವರದಿ
ದಾಂಡೇಲಿ 30: ಜಿಲ್ಲೆಯ ಖ್ಯಾತ ಯೋಗಗುರು ಹಾಗೂ ಸ್ಥಳೀಯ ಹಲೆದಾಂಡೇಲಿ ಸರಕಾರಿ ಉದರ್ು ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಎಚ್.ಎಸ್. ಉದ್ದಂಡಿಯವರನ್ನು ನಗರದ ರೋಟರಿ ಕ್ಲಬ್ವತಿಯಿಂದ ಶನಿವಾರ ರೋಟರಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.
ರೋಟರಿ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ತರಬೇತಿಯನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವುದು ಮತ್ತು ಜಿಲ್ಲೆಯಾದ್ಯಂತ ಯೋಗ ತರಬೇತಿಗಳನ್ನು ನೀಡಿ ಆರೋಗ್ಯವಂತ ಸಮಾಜ ನಿಮರ್ಾಣಕ್ಕೆ ಶ್ರಮಿಸುತ್ತಿರುವುದನ್ನು ಗುರುತಿಸಿ ಎಚ್.ಎಸ್. ಉದ್ದಂಡಿಯವರನ್ನು ರೋಟರಿ ಕ್ಲಬ್ ಪರವಾಗಿ ಸನ್ಮಾನಿಸಲಾಯಿತು.
ರೋಟರಿ ಕ್ಬಿನ ಅಧ್ಯಕ್ಷ ಎಸ್.ಪ್ರಕಾಶ ಶೆಟ್ಟಿಯವರು ಎಚ್.ಎಸ್.ಉದ್ದಂಡಿಯವರು ನಿಸ್ವಾರ್ಥವಾಗಿ ಯೋಗ ತರಬೇತಿಗಳನ್ನು ನೀಡುವುದರ ಮೂಲಕ ಆರೋಗ್ಯವಂತ ಸಮಾಜ ನಿಮರ್ಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದ್ದಾರೆ. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳಾಗಿರುವ ಎಚ್.ಎಸ್,.ಉದ್ದಂಡಿಯವರ ಈ ಮಹತ್ಕಾರ್ಯ ನಿರಂತರವಾಗಿ ನಡೆಯಲೆಂದರು.
ಸನ್ಮಾನಕ್ಕೆ ಕೃತಜ್ಷತೆ ಸಲ್ಲಿಸಿ ಮಾತನಾಡಿದ ಎಚ್.ಎಸ್. ಉದ್ದಂಡಿಯವರು ನಮಗೆ ಗೊತ್ತಿರುವ ಜ್ಞಾನವನ್ನು ಇನ್ನೊಬ್ಬರಿಗೆ ತಿಳಿಸುವ ಸಣ್ಣ ಪ್ರಯತ್ನ ಮಾಡುತ್ತಿರುವ ನನ್ನ ಕಾರ್ಯವನ್ನು ಗುರುತಿಸಿ ಸನ್ಮಾನಿಸಿದ ರೋಟರಿ ಕ್ಲಬಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ರೋಟರಿ ಶಿಕ್ಷಣ ಸಂಸ್ಥೆಯ ಸಮನ್ವಯಾಧಿಕಾರಿ ಅರುಣ್ ನಾಯ್ಕ, ರೋಟರಿ ಕಾರ್ಯದಶರ್ಿ ಎಸ್.ಸೋಮಕುಮಾರ್, ಮುಖ್ಯೋಪಾಧ್ಯಯಿನಿ ಕಲ್ಪನಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರೋಟರಿ ಪದಾಧಿಕಾರಿಗಳಾದ ಸುಧಾಕರ ಶೆಟ್ಟಿ, ಮಿಥುನ್ ನಾಯಕ, ಆರ್.ಪಿ.ನಾಯ್ಕ, ರೋಟರಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 