ತಂಬಾಕು ಜಾಹೀರಾತಿನ ಮೇಲೆ ಕಠಿಣ ಕ್ರಮಕ್ಕೆ ಯೋಗೇಶ್ವರ ಸೂಚನೆ

ಹಾವೇರಿ: ಜ.23 : ತಂಬಾಕು ನಿಯಂತ್ರಣ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗನದಲ್ಲಿ ಬುಧವಾರ ಜರುಗಿದ ತಂಬಾಕು ನಿಯಂತ್ರಣ ಕುರಿತು  ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಯಾವುದೇ ತಂಬಾಕು ಪದಾರ್ಥಗಳಿಗೆ ಸಂಬಂಧಿಸಿದಂತೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಜಾಹೀರಾತು ಮಾಡುವವರ ವಿರುದ್ಧ  ಅಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕು. ಜಿಲ್ಲೆಯ ಪ್ರತಿಯೊಂದು  ಸಕರ್ಾರಿ ಕಚೇರಿಗಳು, ಶಾಲಾ-ಕಾಲೇಜುಗಳನ್ನು ತಂಬಾಕುಮುಕ್ತ ಕಚೇರಿಗಳನ್ನಾಗಿ ಘೋಷಿಸಲು ಕೋಟ್ಪಾ-2003ರ ಕಲಂ 4ರ ಧೂಮಪಾನ ನಿಷೇಧಿತ ಪ್ರದೇಶ ಎಂಬ 60*45 ಸೇ.ಮೀ. ಅಳತೆಯ ನಾಮ ಫಲಕವನ್ನು ಪ್ರವೇಶದ್ವಾರದಲ್ಲಿ ಸಾರ್ವಜನಿಕರಿಗೆ ಕಾಣುವಂತೆ  ಅಳವಡಿಸಬೇಕು ಎಂದು ಸೂಚಿಸಿದರು.

ಶಾಲಾ-ಕಾಲೇಜುಗಳ ಅವರಣದಿಂದ 100 ಮೀ. ಅಂತರದೊಳಗೆ ತಂಬಾಕು ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳ ಮಾರಾಟಮಾಡದಂತೆ ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಅನಿರೀಕ್ಷಿತ ದಾಳಿ ಸಂದರ್ಭದಲ್ಲಿ ಪೋಲಿಸ್ ಇಲಾಖೆಯ ಸಹಕಾರ ಅಗತ್ಯವಾಗಿದ್ದು, ಯಾವುದೇ ದಾಳಿಯ ಸಂದರ್ಭದಲ್ಲಿ  ತನಿಖಾ ತಂಡದೊಂದಿಗೆ  ದಾಳಿಯಲ್ಲಿ ಭಾಗವಹಿಸುವಂತೆ ಸೂಚಿಸಿದರು. 

ವಿವಿಧ ಇಲಾಖೆಗಳ ಸಹಯೋಗದಲ್ಲಿನಡೆಯುವ ಜಾಗೃತಿ ಕಾರ್ಯಕ್ರಮಗಳು ಹಾಗೂ  ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಎನ್.ಎಸ್.ಎಸ್. ಶಿಬಿರಗಳಲ್ಲಿ ಹಾಗೂ ಸಭೆಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡುವಂತೆ ಸಲಹೆ ನೀಡಿದರು.

ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ.ಜಗದೀಶ್ ಪಾಟೀಲ್ ಅವರು ತಂಬಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ  ಆಯೋಜಿಸಲಾದ ಸಭೆ, ಕಾರ್ಯಕ್ರಮಗಳು ಹಾಗೂ ದಾಳಿ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ  ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ್ ದಡ್ಡಿ, ದಾದಾಪೀರ ಹುಲಿಕಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೆಶಕ ಪೀರಜಾದೆ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು