ಯುವ ಕವಿ ಗೋಷ್ಠಿ ಯಶಸ್ವಿ
Young Poets' Session a Success
ತಾಳಿಕೋಟಿ 17: ಪಟ್ಟಣದ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯ, ತಾಳಿಕೋಟಿಯ ಐ.ಕ್ಯೂ.ಎಸ್.ಸಿ. ಘಟಕದ ಆಶ್ರಯದಲ್ಲಿ ಯುವ ಕವಿ ಗೋಷ್ಠಿ ಕಾರ್ಯಕ್ರಮವು ಗುರುವಾರ ಯಶಸ್ವಿಯಾಗಿ ನಡೆಯಿತು. ಮತ್ತು ಅಂಬೆಗಾಲಿನ ಬರಹಗಳು ಪ್ರಶಿಕ್ಷಣಾರ್ಥಿಗಳು ರಚಿತ ಕವನ ಸಂಕಲನ ಬಿಡುಗಡೆ ಮಾಡಲಾಯಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್. ಎಂ. ಬಂಟನೂರ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ, ಸೃಜನಶೀಲತೆ ಹಾಗೂ ಭಾಷಾ ಕೌಶಲ್ಯವನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಹಿತಿ, ಕವಿ ಹಾಗೂ ಸಹಶಿಕ್ಷಕ ವಿದ್ಯಾಕುಮಾರ್ ಅವರು ಯುವ ಕವಿಗಳಿಗೆ ಸಾಹಿತ್ಯದ ಮಹತ್ವವನ್ನು ತಿಳಿಸಿ, ನಿರಂತರ ಓದು ಮತ್ತು ಬರವಣಿಗೆಯ ಮೂಲಕ ಉತ್ತಮ ಸಾಹಿತ್ಯ ಸೃಷ್ಟಿಸಬೇಕೆಂದು ಕರೆ ನೀಡಿದರು.
ಉಪನ್ಯಾಸಕವೈ. ಎಚ್. ಅಂಗಡಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಪ್ರಶಿಕ್ಷಣಾರ್ಥಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸುವ ಮೂಲಕ ಸಾಹಿತ್ಯಾಸಕ್ತಿಯನ್ನು ವ್ಯಕ್ತಪಡಿಸಿದರು. ಪ್ರಶಿಕ್ಷಣಾರ್ಥಿಗಳಾದ ರೂಪಾ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ದೀಪಿಕಾ ನಿರೂಪಿಸಿದರು. ಐಶ್ವರ್ಯ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 