ಯುವ ಪೀಳಿಗೆಯು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ: ಯಶವಂತರಾಜ್ ನಾಗಿರೆಡ್ಡಿ
Young generation should cultivate entrepreneurship: Yashwanthraj Nagireddy
ಲೋಕದರ್ಶನ ವರದಿ
ಯುವ ಪೀಳಿಗೆಯು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ: ಯಶವಂತರಾಜ್ ನಾಗಿರೆಡ್ಡಿ
ಬಳ್ಳಾರಿ 18 : ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಯೋಜನೆಗಳಿಂದ ವಿವಿಧ ಸೌಲಭ್ಯಗಳನ್ನು ಪಡೆದು ವ್ಯಾಪಾರ ಮತ್ತು ಸಂಘ ಸಂಸ್ಥೆ ಜೊತೆ ಸೇರಿ ಯುವಕರು ನವ ಉದ್ಯಮವನ್ನು ಆರಂಭಿಸಿ ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿಟಿಪಿಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಹಯೋಗದಲ್ಲಿ “ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” ಯೋಜನೆಯಡಿ ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಕೈಗಾರಿಕಾ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಯುವಕರು ಉದ್ಯಮವನ್ನು ಸ್ಥಾಪಿಸಲು ಒಂದು ಉತ್ತಮ ಅವಕಾಶ ದೊರೆಯುತ್ತದೆ. ರೈತರು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ಸರ್ಕಾರದಿಂದ ಸಣ್ಣ ಗುಡಿ ಕೈಗಾರಿಕೆ ಸ್ಥಾಪಿಸಲು ಸಬ್ಸಿಡಿ ವ್ಯವಸ್ಥೆ ಇದ್ದು, ಇದರ ಸೌಲಭ್ಯ ಪಡೆದು ನಿರುದ್ಯೋಗಿಗಳಿಗೆ ಕೆಲಸವನ್ನು ನೀಡಬೇಕು ಎಂದು ಹೇಳಿದರು.
ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಿ.ರಾಮಚಂದ್ರ ಅವರು ಮಾತನಾಡಿ, ನಮ್ಮ ದೇಶದಲ್ಲಿ ಸಣ್ಣ ಕೈಗಾರಿಕೆಗಳು ಅತಿ ಹೆಚ್ಚಾಗಿ ಕಂಡು ಬರುತ್ತವೆ. ಅತಿ ಹೆಚ್ಚು ಸಣ್ಣ ಕೈಗಾರಿಕೆಗಳು ರೈತರಿಂದ ಬೆಳವಣಿಯಾಗಿವೆ ಮತ್ತು ರೈತರಿಂದಲೇ ಉದ್ಯಮಗಳು ಬೆಳೆಯುತ್ತಿವೆ ಎಂದು ಹೇಳಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಬಿ ಅವರು ಮಾತನಾಡಿ, ಭಾರತ ದೇಶವು ಆರ್ಥಿಕವಾಗಿ 4ನೇ ಸ್ಥಾನದಲ್ಲಿದೆ. ಅಭಿವೃದ್ಧಿಯಲ್ಲಿ ಕೃಷಿ ಮತ್ತು ಕೈಗಾರಿಕೆಗಳು ಪ್ರಧಾನಪಾತ್ರ ವಹಿಸುತ್ತವೆ. ಸಣ್ಣ ಪ್ರಮಾಣದ ಕೈಗಾರಿಕೆಗಳಿಂದ ಗ್ರಾಮೀಣ ಜನರಿಗೆ ಉದ್ಯೋಗ ಸಿಗುತ್ತದೆ. ವಿದ್ಯಾರ್ಥಿಗಳು ಮತ್ತು ಉದ್ಯಮದಾರರು ಪ್ರೋಡಕ್ಟ್ ಉತ್ಪನ್ನ ಮಾಡಲು ಈ ಯೋಜನೆಯು ಉತ್ತಮವಾಗಿದೆ. ಜಪಾನ್ ದೇಶದ ರೀತಿ ಉತ್ತಮ ಪ್ರೋಡಕ್ಟ್ಗಳನ್ನು ಉತ್ಪತ್ತಿ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಹತ್ತಿ ಗಿರಣಿಗಳ ಸಂಘದ ಅಧ್ಯಕ್ಷ ಡಿ.ತಿಪ್ಪಯ್ಯ, ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್ ಬಿರಾದರ, ಜಿಲ್ಲಾ ಕೈಗಾರಿಕಾ ಜಂಟಿ ಕಾರ್ಯದರ್ಶಿ ಕೆ.ಸಿ ಸುರೇಶ್ಬಾಬು, ಕಾಸಿಯಾ ಜಂಟಿ ಕಾರ್ಯದರ್ಶಿ ಕೇಶವ ಮೂರ್ತಿ ಆರ್, ಜಿಲ್ಲಾ ಅಭಿವೃದ್ಧಿ ಸಮಿತಿಯ ಪ್ಯಾನಾಲ್ ಅಧ್ಯಕ್ಷ ನಾಗರಾಜ ಸಿ ಯಲಿಗಾರ ಸೇರಿದಂತೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 