ಬೇರಲಸಿನ ಕಾಯಿ ಫ್ರೈ ಗಂಟಲಿಗೆ ಸಿಲುಕಿ ಯುವಕ ಸಾವು
Young man dies after food gets stuck in his throat
ಕಾರವಾರ 01: ಊಟ ಮಾಡುವಾಗ ಅನ್ನ ಹಾಗೂ ಬೇರಲಸಿನ ಕಾಯಿ ತುಂಡುಗಂಟಲಿಗೆ ಸಿಲುಕಿದ ಪರಿಣಾಮ ಯುವಕನೊಬ್ಬ ಮೃತಪಟ್ಟ ದುರ್ಘಟನೆ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.
ಮೃತ ಯುವಕನನ್ನು ಬಿಣಗಾ ಮಾಳಸವಾಡದ ಅಮಿತ್ ಮಾಳಸೇಕರ್ (38) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ, ಹುಬ್ಬಳ್ಳಿಯಲ್ಲಿ ಒಂದು ವಾರಚಿಕಿತ್ಸೆ ಪಡೆದು ಮನೆಗೆ ಬಂದಿದ್ದ.ಮನೆಯಲ್ಲಿ ಊಟ ಮಾಡುವಾಗ ಅನ್ನ, ಬೇರಲಸಿನ ಕಾಯಿ ತುಂಡು ಗಂಟಲಲ್ಲಿ ಸಿಲುಕಿದ ಪರಿಣಾಮ ತೊಂದರೆ ಅನುಭವಿಸಿದ ಅಮಿತ್, ಮನೆಯವರು ನೀರು ಕುಡಿಸಲು ಪ್ರಯತ್ನಿಸಿದರೂ, ಬದುಕಿಸುವ ಯತ್ನ ಫಲ ಕಂಡಿಲ್ಲ. ತಕ್ಷಣವೇ ಕುಸಿದುಬಿದ್ದ ಆತನನ್ನು ಕೂಡಲೇ ಸರ್ಕಾರಿ ಆ್ಯಂಬುಲೆನ್ಸ್ ಮೂಲಕ ಕಾರವಾರ ಕ್ರಿಮ್ಸ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ವೈದ್ಯರು ಪರೀಕ್ಷಿಸಿ, ಆಸ್ಪತ್ರೆಗೆ ತರುವ ಮುನ್ನ ಪ್ರಾಣ ಹೋಗಿರುವುದನ್ನು ದೃಢಪಡಿಸಿದರು.
ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಗೆ ಅಮಿತ್ ಸಹೋದರ ಘಟನೆವಿವರಿಸಿ ದೂರು ನೀಡಿದ್ದಾನೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 