ಯುವ ಕಾಂಗ್ರೆಸ್ ವತಿಯಿಂದ ವಿದ್ಯಾರ್ಥಿಗಳಿಗೆ ನೊಟ್ಬುಕ್ ವಿತರಣೆ
Youth Congress distributes notebooks to students
ಕಾಗವಾಡ 21: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಯುವ ನಾಯಕರು, ಲೋಕಸಭೆಯ ವಿರೋಧಿ ಪಕ್ಷದ ನಾಯಕರಾದ ರಾಹುಲ ಗಾಂಧಿಯವರ ಹುಟ್ಟು ಹಬ್ಬದ ನಿಮಿತ್ಯ ಗುರುವಾರ ದಿ. 19 ರಂದು ತಾಲೂಕಿನ ಶೇಡಬಾಳ ಪಟ್ಟಣದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಕಾಂಗ್ರೆಸ್ ವತಿಯಿಂದ ನೋಟು ಬುಕ್ ವಿತರಿಸಿ ಹುಟ್ಟು ಹಬ್ಬ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರ ಆದೇಶ ಮೇರೆಗೆ ಕಾಗವಾಡ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಪಾಟೀಲ ನೇತೃತ್ವದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
ನೋಟ್ ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಾದ ಸುದರ್ಶನ ಜಂತನ್ನವರ, ಆಕಾಶ ನಂದಗಾವ, ಶೀತಲ ಹೆರಲೆಕೆರೆ, ಸೊಹೆಬ್ ಮುಲ್ಲಾ, ಶೀತಲ ಬರಗಾಲೆ, ಸಂಜು ಮುಕುಂದ, ಪ್ರಮೋದ ಗುಂಡಡಗೆ, ಪ್ರತೀಕ ಜಂತನ್ನವರ, ಪ್ರಕಾಶ ಕಲಾಲ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 