ಯುವ ಕಾಂಗ್ರೆಸ್ ವತಿಯಿಂದ ವಿದ್ಯಾರ್ಥಿಗಳಿಗೆ ನೊಟ್ಬುಕ್ ವಿತರಣೆ
Youth Congress distributes notebooks to students
ಕಾಗವಾಡ 21: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಯುವ ನಾಯಕರು, ಲೋಕಸಭೆಯ ವಿರೋಧಿ ಪಕ್ಷದ ನಾಯಕರಾದ ರಾಹುಲ ಗಾಂಧಿಯವರ ಹುಟ್ಟು ಹಬ್ಬದ ನಿಮಿತ್ಯ ಗುರುವಾರ ದಿ. 19 ರಂದು ತಾಲೂಕಿನ ಶೇಡಬಾಳ ಪಟ್ಟಣದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಕಾಂಗ್ರೆಸ್ ವತಿಯಿಂದ ನೋಟು ಬುಕ್ ವಿತರಿಸಿ ಹುಟ್ಟು ಹಬ್ಬ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರ ಆದೇಶ ಮೇರೆಗೆ ಕಾಗವಾಡ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಪಾಟೀಲ ನೇತೃತ್ವದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
ನೋಟ್ ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಾದ ಸುದರ್ಶನ ಜಂತನ್ನವರ, ಆಕಾಶ ನಂದಗಾವ, ಶೀತಲ ಹೆರಲೆಕೆರೆ, ಸೊಹೆಬ್ ಮುಲ್ಲಾ, ಶೀತಲ ಬರಗಾಲೆ, ಸಂಜು ಮುಕುಂದ, ಪ್ರಮೋದ ಗುಂಡಡಗೆ, ಪ್ರತೀಕ ಜಂತನ್ನವರ, ಪ್ರಕಾಶ ಕಲಾಲ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 