ಯುವಕರು ವ್ಯಸನಗಳಿಂದ ದೂರವಿದ್ದು, ನೆಮ್ಮದಿಯ ಜೀವನ ನಡೆಸಿ: ಡಾ. ಚಂದ್ರಶೇಖರ ಹಳಿಂಗಳೆ
ಕಾಗವಾಡ 25: ಇಂದಿನ ಯುವ ಜನತೆ ವ್ಯಸನಗಳಿಗೆ ದಾಸರಾಗಿ ಶಾರೀರಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಯುವಕರು ವ್ಯಸನಗಳಿಂದ ದೂರವಿದ್ದು, ನೆಮ್ಮದಿಯ ಜೀವನ ತಮ್ಮದಾಗಿಸಿಕೊಳ್ಳಬೇಕೆಂದು ಮಿರಜ್ನ ನಿರ್ಮಲ ಆಸ್ಪತ್ರೆ ಮತ್ತು ವ್ಯಸನಮುಕ್ತಿ ಕೇಂದ್ರದ ಸಂಸ್ಥಾಪಕ ಡಾ. ಚಂದ್ರಶೇಖರ ಹಳಿಂಗಳೆ ಹೇಳಿದ್ದಾರೆ.
ಅವರು ಇತ್ತಿಚಿಗೆ ಸಾಂಗಲಿ ಜಿಲ್ಲೆಯ ಮಿರಜ ತಾಲೂಕಿನ ಟಾಕಳಿ-ಬೋಲವಾಡದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಗುರುದೇವ ತಪೋವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಗಶಿರ ಪೊರ್ಣಿಮೆಯಂದು ಹಮ್ಮಿಕೊಂಡಿದ್ದ ಯುವಕರಲ್ಲಿ ವ್ಯಸನಮುಕ್ತಿ ಮತ್ತು ನೆಮ್ಮದಿಯ ಜೀವನದ ಕುರಿತು ನಡೆದ ಉಪನ್ಯಾಸದಲ್ಲಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಡಾ. ಚಂದ್ರೇಶಖರ ಹಳಿಂಗಳೆ, ಡಾ. ನಿಶಾ ಹಳಿಂಗಳೆ, ಮತ್ತು ನಿರ್ಮಲಾ ಹಳಿಂಗಳೆ ಇವರನ್ನು ಆಶ್ರಮದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಚಂದ್ರಶೇಖರಹಳಿಂಗಳೆ, ಡಾ. ನಿಶಾ ಹಳಿಂಗಳೆ ಮತ್ತು ನಿರ್ಮಲ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಗುರುದೇವ ತಪೋವನದ ಪ.ಪೂ. ಶಿವದೇವ ಶ್ರೀಗಳು, ತಪೋವನದ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 