ಯುವಕರು ವ್ಯಸನಗಳಿಂದ ದೂರವಿದ್ದು, ನೆಮ್ಮದಿಯ ಜೀವನ ನಡೆಸಿ: ಡಾ. ಚಂದ್ರಶೇಖರ ಹಳಿಂಗಳೆ
ಕಾಗವಾಡ 25: ಇಂದಿನ ಯುವ ಜನತೆ ವ್ಯಸನಗಳಿಗೆ ದಾಸರಾಗಿ ಶಾರೀರಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಯುವಕರು ವ್ಯಸನಗಳಿಂದ ದೂರವಿದ್ದು, ನೆಮ್ಮದಿಯ ಜೀವನ ತಮ್ಮದಾಗಿಸಿಕೊಳ್ಳಬೇಕೆಂದು ಮಿರಜ್ನ ನಿರ್ಮಲ ಆಸ್ಪತ್ರೆ ಮತ್ತು ವ್ಯಸನಮುಕ್ತಿ ಕೇಂದ್ರದ ಸಂಸ್ಥಾಪಕ ಡಾ. ಚಂದ್ರಶೇಖರ ಹಳಿಂಗಳೆ ಹೇಳಿದ್ದಾರೆ.
ಅವರು ಇತ್ತಿಚಿಗೆ ಸಾಂಗಲಿ ಜಿಲ್ಲೆಯ ಮಿರಜ ತಾಲೂಕಿನ ಟಾಕಳಿ-ಬೋಲವಾಡದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಗುರುದೇವ ತಪೋವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಗಶಿರ ಪೊರ್ಣಿಮೆಯಂದು ಹಮ್ಮಿಕೊಂಡಿದ್ದ ಯುವಕರಲ್ಲಿ ವ್ಯಸನಮುಕ್ತಿ ಮತ್ತು ನೆಮ್ಮದಿಯ ಜೀವನದ ಕುರಿತು ನಡೆದ ಉಪನ್ಯಾಸದಲ್ಲಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಡಾ. ಚಂದ್ರೇಶಖರ ಹಳಿಂಗಳೆ, ಡಾ. ನಿಶಾ ಹಳಿಂಗಳೆ, ಮತ್ತು ನಿರ್ಮಲಾ ಹಳಿಂಗಳೆ ಇವರನ್ನು ಆಶ್ರಮದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಚಂದ್ರಶೇಖರಹಳಿಂಗಳೆ, ಡಾ. ನಿಶಾ ಹಳಿಂಗಳೆ ಮತ್ತು ನಿರ್ಮಲ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಗುರುದೇವ ತಪೋವನದ ಪ.ಪೂ. ಶಿವದೇವ ಶ್ರೀಗಳು, ತಪೋವನದ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 