ಜುಗೂಳ ಗ್ರಾ ಪಂ ವ್ಯಾಪ್ತಿಯ ಶಹಾಪೂರ ಗ್ರಾಮಕ್ಕೆ ಜಿ.ಪಂ. ಸಿಇಓ ಭೇಟ್ಟಿ..! ಜೆಜೆಎಂ ಕಾಮಗಾರಿ ಪರೀಶೀಲನೆ..!!
Z.P. CEO visits Shahapura village under Jugula Gram Panchayat! Inspection of JJM work..!!
ಕಾಗವಾಡ 18: ತಾಲೂಕಿನ ಜುಗೂಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಹಾಪೂರ ಗ್ರಾಮಕ್ಕೆ ಗುರುವಾರ ದಿ. 17 ರಂದು ಬೆಳಗಾವಿ ಜಿಲ್ಲಾ ಪಂಚಾಯತಿಯ ಸಿಇಓ ರಾಹುಲ ಶಿಂಧೆ ಭೇಟ್ಟಿ ನೀಡಿ, ಜುಗೂಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೊದಲ ಹಂತದಲ್ಲಿ ಪೂರ್ಣಗೊಂಡ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಕೆಯ ಜೆಜೆಎಂ ಕಾಮಗಾರಿಯ ವಿಕ್ಷಣೆ ಮಾಡಿ, ಸಂತಸ ವ್ಯಕ್ತಪಡಿಸಿದರು.
ಜೊತೆಗೆ ಈ ವರ್ಷದ ರಾಜ್ಯ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜುಗೂಳ ಗ್ರಾಮ ಆಯ್ಕೆಯಾಗಿರುವ ಕುರಿತು ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿದರು.
ಈ ವೇಳೆ ಕಾಮಗಾರಿಯ ಗುತ್ತಿಗೆದಾರ ಮತ್ತು ಗ್ರಾಮ ಪಂಚಾಯತಿ ಸದಸ್ಯರಾದ ಉಮೇಶ ಪಾಟೀಲ ಸಿಇಓ ಅವರಿಗೆ ಕಾಮಗಾರಿಯ ಕುರಿತು ಮಾಹಿತಿ ನೀಡಿದರು. ಇನ್ನೂ ದ್ವೀತಿಯ ಹಂತದ ಕಾಮಗಾರಿ ಜುಗೂಳ ಮತ್ತು ಮಂಗಾವತಿ ಗ್ರಾಮದಲ್ಲಿ ಕೊನೆಯ ಹಂತದಲ್ಲಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಪ್ರಾರಂಭಗೊಳ್ಳಲಿದೆ ಎಂದು ತಿಳಿಸಿದ ಅವರು, ಜುಗೂಳ ಗ್ರಾಮದ ಅಭಿವೃದ್ಧಿ ಸಾಕಷ್ಟು ಸಹಕಾರ ನೀಡುತ್ತಿರುವ ಶಾಸಕ ರಾಜು ಕಾಗೆ, ಸಂಸದೆ ಪ್ರೀಯಾಂಕಾ ಜಾರಕಿಹೊಳಿಯರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಮಯದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವೀಂದ್ರ ಮುರಗಾಲಿ, ಎಸ್ಓ ಕಿರಣ ಮಾಳಿ, ಅಕ್ಷಯ ಚುರಮುರಿ, ತಾ.ಪಂ. ವೀರಣ್ಣಾ ವಾಲಿ, ಜುಗೂಳ ಗ್ರಾಮ ಪಂಚಾಯತಿ ಅಧ್ಯಕ್ಷ ಕಾಕಾಸಾಬ ಪಾಟೀಲ, ಪಿಡಿಓ ಶೈಲಶ್ರೀ ಬಜಂತ್ರಿ, ತಾತ್ಯಾಸಾಬ ಜಾಧವ, ವಿಜಯ ನಾಯಿಕ, ಮಲಗೌಡಾ ಪಾಟೀಲ, ಶಿವಾನಂದ ಪಾಟೀಲ, ಬಾಬಾಸಾಹ ಹುನ್ನರಗೆ, ಆನಂದ ಭಿರಡಿ, ಬಾಬಾಸಾಬ ತಾರದಾಳೆ, ಅವಿನಾಶ ಪಾಟೀಲ, ದಾದಾ ಅಂಬಿ, ಚಿದಾನಂದ ತಾರದಾಳೆ, ಅಮೀನ ನಂದಗಾಂವೆ ಸೇರಿದಂತೆ ಜುಗೂಳ, ಶಹಾಪೂರ ಗ್ರಾಮಸ್ಥರು ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 