ಆಂಬಿಡೆಂಟ್ ವಂಚನ:ೆ ಪ್ರಕರಣ ಮುಚ್ಚಿ ಹಾಕಲು ಮುಂದಾದವರ ಪಟ್ಟಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಹಾಗೂ ಓರ್ವ ಯುವತಿಯ ಹೆಸರು
ಬೆಂಗಳೂರು 15, ಆಂಬಿಡೆಂಟ್ ವಂಚನೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿರುವವರ ಪಟ್ಟಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಹಾಗೂ ಓರ್ವ ಯುವತಿಯ ಹೆಸರುಗಳು ಈಗ ಕೇಳಿಬರುತ್ತಿವೆ.
ಈಗಾಗಲೇ ಈ ಪ್ರಕರಣದಲ್ಲಿ ರಾಜಕಾರಣಿಗಳು, ಪತ್ರಕರ್ತರು ಮತ್ತು ರೌಡಿಗಳ ಹೆಸರುಗಳು ಕೇಳಿಬಂದಿದ್ದವು.
ಆಂಬಿಡೆಂಟ್ ಕಂಪನಿಯ ಮಾಲೀಕ ಸಯ್ಯದ್ ಫರೀದ್ ವಿರುದ್ಧ ಡಿಜೆಹಳ್ಳಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು.
ಪೊಲೀಸ್ ಅಧಿಕಾರಿಗಳು ಹಾಗೂ ಆ ಯುವತಿ ವಂಚನೆಗೊಳಗಾದ ಹೂಡಿಕೆದಾರರಿಂದ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಫರೀದ್ಗೆ ಸಹಾಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೆಲವು ಪತ್ರಕರ್ತರು ಕೂಡ ಈ ಪ್ರಕರಣದಲ್ಲಿ ಲಾಭ ಪಡೆದುಕೊಂಡಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.
ತನಿಖೆ ತೀವ್ರಗೊಳುತ್ತಿದ್ದಂತೆ ದಿನೇ ದಿನೆ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸಿಸಿಬಿ ಪೊಲೀಸರಿಗೆ ಹೊಸ ಹೊಸ ಮಾಹಿತಿಗಳು ಲಭ್ಯವಾಗುತ್ತಿವೆ.
ಪ್ರಕರಣದಲ್ಲಿ ಹಲವು ಗಣ್ಯ ವ್ಯಕ್ತಿಗಳು ಶಾಮೀಲಾಗಿರುವುದು ಕಂಡು ಬರುತ್ತಿದ್ದು, ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
15000ಕ್ಕೂ ಹೆಚ್ಚು ಹೂಡಿಕೆದಾರರಿಗೆ 600 ಕೋಟಿ ರೂ. ವಂಚಿಸಿರುವ ಫರೀದ್ಗೆ ಹಲವು ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಬೆಂಬಲ ನೀಡಿದ್ದಾರೆಂದು ತಿಳಿದುಬಂದಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 