ಅಮೃತಸರ ನಿರಾನ್ಕಾರಿ ಭವನದಲ್ಲಿ ಸ್ಫೋಟ: ಭಯೋತ್ಪಾದಕರ ಕೃತ್ಯ!?
ಚಂಡೀಗಢ: ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ನಡೆದಿರುವ ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ.
ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆಗಳು ಹೆಚ್ಚಾಗಿವೆ. ಏಕೆಂದರೆ ಅದು ಒಂದು ಗುಂಪಿನ ಮೇಲೆ ನಡೆದಿರುವ ದಾಳಿಯಾಗಿದೆ, ಆದ್ದರಿಂದ ಇದನ್ನು ಭಯೋತ್ಪಾದಕ ಕೃತ್ಯದ ದೃಷ್ಟಿಯಿಂದಲೇ ತನಿಖೆ ನಡೆಸುತ್ತೇವೆ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ.
ಭಯೋತ್ಪಾದಕ ಕೃತ್ಯವಾಗಿರದೇ ಇದ್ದರೆ ಸಮೂಹದ ಮೇಲೆ ಗ್ರೆನೇಡ್ ದಾಳಿ ನಡೆಸುವ ಸಾಧ್ಯತೆಗಳು ಕಡಿಮೆ ಇದೆ ಎಂದು ಪಂಜಾಬ್ ಡಿಜಿಪಿ ಸುರೇಶ್ ಅರೋರ ಹೇಳಿದ್ದಾರೆ.
ಇದೇ ವೇಳೆ ಸ್ಫೋಟದ ಘಟನೆ ಕುರಿತು ನಿದರ್ಿಷ್ಟವಾದ ಸುಳಿವು ಸಿಕ್ಕಿಲ್ಲ ಎಂದೂ ಡಿಜಿಪಿ ತಿಳಿಸಿದ್ದಾರೆ. ನಿರಾನ್ಕಾರಿ ಭವನದಲ್ಲಿ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದರು. ಕೆಲ ದಿನಗಳ ಹಿಂದಷ್ಟೇ ದಾಳಿ ನಡೆಯುವ ಕುರಿತು ಗುಪ್ತಚರ ಇಲಾಖೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 