ಅಮೃತಸರ ನಿರಾನ್ಕಾರಿ ಭವನದಲ್ಲಿ ಸ್ಫೋಟ: ಭಯೋತ್ಪಾದಕರ ಕೃತ್ಯ!?
ಚಂಡೀಗಢ: ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ನಡೆದಿರುವ ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ.
ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆಗಳು ಹೆಚ್ಚಾಗಿವೆ. ಏಕೆಂದರೆ ಅದು ಒಂದು ಗುಂಪಿನ ಮೇಲೆ ನಡೆದಿರುವ ದಾಳಿಯಾಗಿದೆ, ಆದ್ದರಿಂದ ಇದನ್ನು ಭಯೋತ್ಪಾದಕ ಕೃತ್ಯದ ದೃಷ್ಟಿಯಿಂದಲೇ ತನಿಖೆ ನಡೆಸುತ್ತೇವೆ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ.
ಭಯೋತ್ಪಾದಕ ಕೃತ್ಯವಾಗಿರದೇ ಇದ್ದರೆ ಸಮೂಹದ ಮೇಲೆ ಗ್ರೆನೇಡ್ ದಾಳಿ ನಡೆಸುವ ಸಾಧ್ಯತೆಗಳು ಕಡಿಮೆ ಇದೆ ಎಂದು ಪಂಜಾಬ್ ಡಿಜಿಪಿ ಸುರೇಶ್ ಅರೋರ ಹೇಳಿದ್ದಾರೆ.
ಇದೇ ವೇಳೆ ಸ್ಫೋಟದ ಘಟನೆ ಕುರಿತು ನಿದರ್ಿಷ್ಟವಾದ ಸುಳಿವು ಸಿಕ್ಕಿಲ್ಲ ಎಂದೂ ಡಿಜಿಪಿ ತಿಳಿಸಿದ್ದಾರೆ. ನಿರಾನ್ಕಾರಿ ಭವನದಲ್ಲಿ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದರು. ಕೆಲ ದಿನಗಳ ಹಿಂದಷ್ಟೇ ದಾಳಿ ನಡೆಯುವ ಕುರಿತು ಗುಪ್ತಚರ ಇಲಾಖೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿತ್ತು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 