ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ, ಎಸ್ಎಪ್ಐನಿಂದ ಪ್ರತಿಭಟನೆ
ಲೋಕದರ್ಶನ ವರದಿ
ಯಲಬುಗರ್ಾ 06: ಕನರ್ಾಟಕ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸಮ್ಮಿಶ್ರ ಸರಕಾರದಿಂದ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಅನ್ಯಾಯವಾಗಿದೆ ಎಂದು ಎಸ್ಎಪ್ಆಯ್ ಸಂಘಟನೆಯ ತಾಲೂಕ ಸಂಚಾಲಕ ಎಮ್ ಸಿದ್ದಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ತಹಶೀಲ್ದಾರ ರಮೇಶ ಅಳವಂಡಿಕರ್ ಅವರ ಮುಖಾಂತರ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡಿಸಿರುವ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರದ ಬಗ್ಗೆ ಅತ್ಯಂತ ನಿರ್ಲಕ್ಷ ವಹಿಸಲಾಗಿದೆ ಕಳೆದ ಬಾರಿ 11;78 ರಷ್ಟು ಹಣ ಮೀಸಲಿಡಲಾಗಿತ್ತು ಈ ಬಾರಿ 0.78% ರಷ್ಟು ಹಣವನ್ನು ಕಡಿತಗೊಳಿಸಲಾಗಿದೆ ಕೇವಲ 11% ರಷ್ಟು ಹಣವನ್ನು ಮೀಸಲಿರಿಸಿರುವದನ್ನು ನೋಡಿದರೆ ಗೊತ್ತಾಗುತ್ತದೆ ಇವರಿಗೆ ಶಿಕ್ಷಣಕ್ಕೆ ಇರುವ ಕಾಳಜಿ ಇದೆ ಎನ್ನುವದು ಹಾಗೂ ರಾಜ್ಯದ ಶಾಲಾ ಕಾಲೇಜುಗಳ ಕಟ್ಟಡ ದುರಸ್ಥಿಗಾಗಿ ಕೇವಲ 150 ಕೋಟಿ ಮೀಸಲಿಡಲಾಗಿದೆ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಶಾಲೆ ಕಾಲೇಜುಗಳು ಶೀಥಲಾವಸ್ಥೆಯಲ್ಲಿವೆ ಈ ಹಣ ಯಾವುದಕ್ಕೂ ಸಾಕಾಗುವದಿಲ್ಲಾ ಶಾಲೆಗಳ ವಿಲೀನ ಹೆಸರಲ್ಲಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆದಿದೆ ದಾಖಲಾತಿ ಹೆಚ್ಚಿಸುವ ಬದಲು ಶಾಲೆ ಮುಚ್ಚಿಸುವದು ಯಾವ ನ್ಯಾಯ? ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ನಿಡದೆ ದ್ರೊಹ ಮಾಡಿದೆ ಇವೆಲ್ಲಾ ಕಾರಣಗಳಿಗೆ ಮುಂಬರುವ ದಿನಗಳಲ್ಲಿ ಪರಿಹಾರ ದೊರೆಯದೆ ಇದ್ದಲ್ಲಿ ಉಗ್ರ್ರ ಹೋರಾಟ ಮಾಡಲಾಗುವದು ಎಂದು ತಿಳಿಸಿದರು. ಸಂಘದ ಸದಸ್ಯರಾದ ಅಲ್ಲಾಭಕ್ಷೀ, ಹೊನ್ನೂರಪ್ಪ, ಹನುಮಂತಪ್ಪ.ನಾಗರಾಜ ಸೇರಿದಂತೆ ಶಾಲಾ ಕಾಲೇಜು ವಿದ್ಯಾಥರ್ಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 