ಅಧಿಕಾರ ಮೊಟಕುಗೊಳಿಸುವಂತೆ ಸುಪ್ರೀಂಗೆ ಮನವಿ ಮಾಡಲು ಮುಂದಾದ ಆಂಧ್ರ ಸಿಎಂ
ಅಮರಾವತಿ,ನ.20- ರಾಜ್ಯದಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಒಪ್ಪಿಗೆಯ ಅನುಮತಿಯನ್ನು ಹಿಂಪಡೆದು, ಈ ಮೂಲಕ ಕೇಂದ್ರ ಸಕರ್ಾರ ರಾಜ್ಯದಲ್ಲಿ ನಡೆಸುತ್ತಿದ್ದ ತನಿಖೆಗಳಿಗೆ ಬ್ರೇಕ್ ಹಾಕಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತೀಗ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿದರ್ೇಶನಾಲಯದಂತಹ ಕೇಂದ್ರೀಯ ಏಜೆನ್ಸಿಗಳ ಅಧಿಕಾರವನ್ನು ಮೊಟಕುಗೊಳಿಸುವಂತೆ ಸುಪ್ರೀಂಕೋಟರ್್ಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.
ಬಿಜೆಪಿಯ ಎಲ್ಲಾ ವಿರೋಧಿ ಪಕ್ಷಗಳೊಂದಿಗೆ ದಿಲ್ಲಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ವನ್ನು ಸಿದ್ಧಗೊಳಿಸುತ್ತೇವೆ. ಸಿಎಂಪಿ ಸಿದ್ಧವಾದಾಗ ಎಲ್ಲ ವಿರೋಧ ಪಕ್ಷಗಳು ಸೇರಿ ಕೇಂದ್ರೀಯ ಏಜೆನ್ಸಿಗಳಿಗೆ ತಮ್ಮ ತಮ್ಮ ರಾಜ್ಯದಲ್ಲಿ ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸುವಂತೆ ಕೇಂದ್ರೀಯ ಏಜೆನ್ಸಿಗಳಿಗೆ ಸೂಚನೆ ನೀಡಲಿವೆ. ಈ ಮೂಲಕ ಕೇಂದ್ರದ ರಾಜಕೀಯ ಅಜೆಂಡಾವನ್ನು ಹತ್ತಿಕ್ಕುವುದು ನಮ್ಮ ಉದ್ದೇಶವಾಗಿದೆ ಎಂದು ಟಿಡಿಪಿ ಸಂಸದರೊಬ್ಬರು ತಿಳಿಸಿದ್ದಾರೆ.
ಎಲ್ಲ ಪಕ್ಷಗಳು (ಬಿಜೆಪಿ ವಿರೋಧಿ) ಮತ್ತೊಂದು ಸಮಾಲೋಚನಾ ಸಭೆ ನಡೆಸಲಿವೆ. ಅಗತ್ಯವಿದ್ದರೆ ಮತ್ತು ಒಮ್ಮತವಾದರೆ, ಆದಾಯ ತೆರಿಗೆ ಮತ್ತು ಇಡಿ ಅಧಿಕಾರಿಗಳನ್ನು ಮೊಟಕುಗೊಳಿಸುವಂತೆ ಸವರ್ೋಚ್ಚ ನ್ಯಾಯಾಲಯಕ್ಕೆ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಸಂಸದ ಸಿಎಂ ರಮೇಶ್, ಶಾಸಕ ಪೊಥುಲಾ ರಾಮರಾವ್ , ಮಾಜಿ ಶಾಸಕ ಬೀಡಾ ಮಸ್ತಾನ್ ರಾವ್ ಸೇರಿದಂತೆ ಟಿಡಿಪಿ ಮುಖಂಡರ ಉದ್ಯಮ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಹುಡುಕಾಟ ಪ್ರಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ನಾವು ಎನ್ಡಿಎ ಕೂಟದಿಂದ ಹೊರಬಿದ್ದ ಮೇಲೆ ಎಂದು ಟಿಡಿಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಸಿಬಿಐ, ಜಾರಿ ನಿದರ್ೇಶನಾಲಯ (ಇಡಿ), ಅದಾಯ ತೆರಿಗೆ ಇಲಾಖೆ (ಐಟಿ) ತನಿಖಾಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ರಾಜಕೀಯ ವೈರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ನಾಯ್ಡು ಇತ್ತೀಚೆಗೆ ಆರೋಪಿಸಿದ್ದರು.
ಇದರ ಬೆನ್ನಲ್ಲೇ, ರಾಜ್ಯದಲ್ಲಿ ಸಿಬಿಐ ಅಧೀನದಲ್ಲಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ನಡೆಸಲು ಸಿಬಿಐ ಬದಲಾಗಿ ಎಸಿಬಿ (ಭ್ರಷ್ಟಚಾರ ನಿಗ್ರಹ ದಳ)ಗೆ ಜವಾಬ್ದಾರಿಯನ್ನ ವಗರ್ಾವಣೆ ಮಾಡಲಾಗಿದೆ ಎಂದು ಆಂಧ್ರಪ್ರದೇಶ ಸಕರ್ಾರ ಅಧಿಸೂಚನೆ ಹೊರಡಿಸಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 