ಪ್ರಧಾನಿ ಮೋದಿ ನೇತೃತ್ವದ ಆಡಳಿತ ತುತರ್ು ಪರಿಸ್ಥಿತಿಗಿಂತಲೂ ದಾರುಣವಾಗಿದೆ: ಅರುಣ ಶೌರಿ
ನವದೆಹಲಿ: ಪ್ರಸ್ತುತ ದೇಶದ ಪರಿಸ್ಥಿತಿ 1975-77ರ ನಡುವಿನ ತುತರ್ು ಪರಿಸ್ಥಿತಿಗಿಂತಲೂ ದಾರುಣವಾಗಿದೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಗೆ ತಮ್ಮ ಕರ್ತವ್ಯದ ಬಗ್ಗೆ ಅನುಕಂಪ, ಅರಿವು ಇತ್ತು. ಆದರೆ ಇಂದಿನ ಪ್ರಧಾನಿ ಮೋದಿಯವರಿಗೆ ತಮ್ಮ ಕರ್ತವ್ಯದ ಬಗ್ಗೆ ಅನುಕಂಪವೇ ಇಲ್ಲ ಎಂದು ಖ್ಯಾತ ಪತ್ರಕರ್ತ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ಟಾಟಾ ಸಾಹಿತ್ಯ ಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ನ್ಯಾಯಾಂಗ ವ್ಯವಸ್ಥೆಯೊಳಗಿನ ಅಪಾಯ' ಎಂಬ ವಿಚಾರದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ವಿಪಕ್ಷಗಳೆಲ್ಲಾ ಒಗ್ಗೂಡಿ ಮುಂದಿನ 2019ರ ಲೋಕಸಭಾ ಚುನಾವಣೆಯಲ್ಲಿ ಹೋರಾಡಿದರೆ ಪ್ರಧಾನಿ ಮೋದಿಯ ಸವರ್ಾಧಿಕಾರಿ ಧೋರಣೆಗೆ ಬ್ರೇಕ್ ಹಾಕಬಹುದು ಎಂದು ಶೌರಿ ಕರೆ ನೀಡಿದ್ದಾರೆ.
ದೇಶದ ಇಂದಿನ ಪರಿಸ್ಥಿತಿಗಿಂತ 1975-77ರ ನಡುವಿನ ತುತರ್ು ಪರಿಸ್ಥಿತಿಯೇ ಮೇಲು ಎಂದೆನಿಸುತ್ತದೆ. ಏಕೆಂದರೆ ಅಂದು ಇಂದಿರಾಗಾಂಧಿ ಅವರಿಗೆ ತಮ್ಮ ಕೃತ್ಯದ ಬಗ್ಗೆ ಅನುಕಂಪವಿತ್ತು. ಆದರೆ ಈಗಿನ ಪ್ರಧಾನಿಗೆ ಅದಿಲ್ಲ. ಅಂದು ಇಂದಿರಾಗಾಂಧಿ ಸುಮಾರು 75 ಸಾವಿರ ಮಂದಿಯನ್ನು ಜೈಲಿಗಟ್ಟಿದ್ದರು. ಆದರೆ ಅದಕ್ಕೊಂದು ಮಿತಿ ಇತ್ತು. ಅದನ್ನು ಇಂದಿರಾಗಾಂಧಿ ದಾಟಿರಲಿಲ್ಲ. ಆದರೆ ಇಂದಿನ ಪ್ರಧಾನಿಗೆ ತಮ್ಮ ಕೃತ್ಯದ ಬಗ್ಗೆ ಅನುಕಂಪವೇ ಇಲ್ಲ. ದೇಶದ ಪ್ರಮುಖ ಸಂಸ್ಥೆಗಳನ್ನೇ ಬುಡಮೇಲು ಮಾಡ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
2014ರ ಸಕರ್ಾರಿ ವಿರೋಧಿ ಅಲೆಯಲ್ಲಿ ಮೋದಿ ಗೆದ್ದಿರಬಹುದು. ಆದರೂ ಅವರ ಮತ ಗಳಿಕೆ ಕೇವಲ ಶೇ.31ರಷ್ಟು ಮಾತ್ರ. ಅಂದರೆ ಶೇ.69ರಷ್ಟು ಮಂದಿ ಮೋದಿ ವಿರುದ್ಧವಾಗಿ ಮತ ಹಾಕಿದ್ದಾರೆ. ಇದರಿಂದಲೇ ತಿಳಿಯುತ್ತದೆ ಜನತೆಗೂ ಮೋದಿ ಮೇಲೆ ಸಂಪೂರ್ಣ ವಿಶ್ವಾಸವಿಲ್ಲ ಎಂಬುದು.
ಒಂದು ವೇಳೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿಪಕ್ಷಗಳು ಒಗ್ಗಟ್ಟಾಗಿ ಲೋಕಸಭಾ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದರೆ 2019ರ ಚುನಾವಣೆಯಲ್ಲಿ ಖಂಡಿತಾ ಮೋದಿ ನೇತೃತ್ವದ ಬಿಜೆಪಿ ಸಕರ್ಾರವನ್ನು ಮಣಿಸಬಹುದು. ಒಂದು ವೇಳೆ ವಿಪಕ್ಷಗಳು ಈ ಬಗ್ಗೆ ಒಪ್ಪದಿದ್ದರೆ ವಿಪಕ್ಷಗಳ ಮತ ವಿಭಜನೆಯಾಗಿ ಮತ್ತೆ ಮೋದಿಗೆ ನೆರವಾಗುತ್ತದೆ. ಅದರಿಂದ ಈಗಿರುವ ದೇಶದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆ ಎಂದು ಕಳವಳವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 