ವಿವಿಧೆಡೆ ದಾಳಿ; ಇಬ್ಬರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

ಬಳ್ಳಾರಿ 21: ಕಾರ್ಮಿಕ ಇಲಾಖೆ ವತಿಯಿಂದ ಸಿರುಗುಪ್ಪ ಪಟ್ಟಣದ ಬಳ್ಳಾರಿ ರಸ್ತೆ, ಆದೋನಿ ರಸ್ತೆ, ಸಿಂಧನೂರು ರಸ್ತೆ, ದೇಶನೂರು ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿರುವ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ಮಾಡಿ 02 ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳನ್ನು ಮುಖ್ಯವಾಹಿನಿ ತರಲು ಶಾಲೆಗಳಿಗೆ ಮರು ದಾಖಲಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಅವರು ತಿಳಿಸಿದ್ದಾರೆ. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ,  ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್‌ಲೈನ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನೀರೀಕ್ಷಕರ ಟಾಸ್ಕ್‌ ಪೋರ್ಸ್‌ ಸಮಿತಿ ಸಭೆ ನಡೆಸಿ ದಾಳಿ ಮಾಡಲಾಗಿದೆ. 

ಈ ಟಾಸ್ಕ್‌ ಪೋರ್ಸ್‌ ಸಮಿತಿಯಲ್ಲಿ ಸಿರುಗುಪ್ಪ ಉಪ ತಹಶೀಲ್ದಾರ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಮಹಾಂತೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ  ಬಿ.ಉಮೇಶ್, ಕಾರ್ಮಿಕ ನೀರೀಕ್ಷಕ ತಿರುಮಲೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನೆ ಸಿಬ್ಬಂದಿ ಯು.ಶ್ರೀನಿವಾಸುಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಿಬ್ಬಂದಿ  ಸುಭಾಷ್ ಚಂದ್ರ, ಚೈಲ್ಡ್‌ಲೈನ್ ಸಿಬ್ಬಂದಿ ಚಂದ್ರಕಳ ಸೇರಿದಂತೆ ಕಂದಾಯ ಇಲಾಖೆ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.