ಅಧಿಕಾರಿಗಳ ನಿರ್ಲಕ್ಷ್ಯ ರಸ್ತೆ ಗುಂಡಿಗಳಾಗಿ ಪರಿವರ್ತನೆ
ಗದಗ-ಲಕ್ಷ್ಮೇಶ್ವರ ಸ್ಥಳೀಯ ಮುಖ್ಯ ರಸ್ತೆಯಾದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ದುರ್ಗತಿಯನ್ನು ಪರಿಹರಿಸುವ ಅಧಿಕಾರಿಗಳ.ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಅಂಬೇಡ್ಕರ್ ನಗರದ ಜನರ ಗೋಳನ್ನು ಕೇಳುವವರೆ ಇಲ್ಲದಂತಾಗಿದೆ.ಇಲ್ಲಿಯ ಮಕ್ಕಳು ರಸ್ತೆ ದಾಟಿ ಶಾಲೆಗೆ ಹೋಗುವದು ತುಂಬಾ ಕಷ್ಟವಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಜನರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿ ಇಲ್ಲವೆ ಮುಂದೊಂದು ದಿನ ರಸ್ತೆ ಮದ್ಯೆಯೇ ಸಸಿ ನೆಡುವ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಆಹ್ವಾನಿಸುತ್ತೇವೆಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇಲ್ಲಿ ವಾಹನ ತಿರುಗಾಡುವದರಿಂದ ರಸ್ತೆ ಪಕ್ಕದಲ್ಲಿರುವ ಮನೆಗಳಲ್ಲಿ ಹೆಚ್ಚಿನ ಧೂಳು ಮನೆ ಸೇರುತ್ತಿದೆ ಈ ಗುಂಡಿಯಲ್ಲಿ ಈ ಮೊದಲು ಒಂದು ಗಾಡಿಯು ಕೂಡಾ ಪಲ್ಟಿಯಾಗಿದೆ ಆದರೂ ಗಮನ ಹರಿಸದ ಅಧಿಕಾರಿಗಳು ಮುಂದೆ ಅದೆಂತಹ ದುರಂತವನ್ನು ನೋಡಬಯಸುತ್ತಿದ್ದಾರೊ ಗೊತ್ತಿಲ್ಲ. ಗಮನ ಹರಿಸಿ ಇತ್ತ ಕಡೆ ಅಧಿಕಾರಿಗಳೆ ಜನಪ್ರತಿನಿಧಿಗಳೆ ಸಾರ್ವಜನಿಕರು ಏಳಿ ಎದ್ದೇಳಿ ಎನ್ನುವ ಮೊದಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎದ್ದೇಳಲಿ ರಸ್ತೆ ಕಾಮಗಾರಿ ಪ್ರಾರಂಭವಾಗಲಿ ಎಂಬುದು ನಾಗರಿಕರ ಆಗ್ರಹವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 