ಬೈಲಹೊಂಗಲ: ಕೂಲಿ ಕಾರ್ಮಿಕರಿಗೆ ಉಚಿತ ತಪಾಸಣಾ ಶಿಬಿರ
ಲೋಕದರ್ಶನ ವರದಿ
ಬೈಲಹೊಂಗಲ 13: ತಾಲೂಕಿನ ಬೈಲವಾಡ ಗ್ರಾ.ಪಂ. ವ್ಯಾಪ್ತಿಯ ಯರಡಾಲ ಗ್ರಾಮದಲ್ಲಿ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮ ಬುಧವಾರ ಏರ್ಪಡಿಸಲಾಗಿತ್ತು.
ತಾಲೂಕಾ ಉದ್ಯೋಗ ಖಾತರಿ ಸಹಾಯಕ ನಿದರ್ೇಶಕ ಸುಭಾಶ ಸಂಪಗಾಂವಿ ಮಾತನಾಡಿ, ಯಾರೂ ಗುಳೆ ಹೋಗದಂತೆ ಗ್ರಾಮೀಣ ಬಡ ಕೂಲಿ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸಕರ್ಾರ ಈ ಉದ್ಯೋಗ ಖಾತ್ರಿ ಯೋಜನೆ ರೂಪಿಸಿದ್ದು ಇದನ್ನು ಸದ್ಭಳಕೆ ಮಾಡಿಕೊಂಡು ಸವಲತ್ತುಗಳನ್ನು ಪಡೆಯಬೇಕೆಂದರು.
ಪಂಚಾಯತ ಅಭಿವೃದ್ದಿ ಅಧಿಕಾರಿ ಬಿ.ಎಲ್.ಬೆಳವಲ್ ಮಾತನಾಡಿ, ಉದ್ಯೋಗ ಖಾತ್ರಿ ಕಾರ್ಯದಲ್ಲಿ ನಿರತರಾಗಿರುವ ಕಾಮರ್ಿಕರಿಗೆ ಉಚಿತ ಆರೋಗ್ಯ ಕಲ್ಪಿಸಲಾಗಿದ್ದು ಪ್ರತಿಯೊಬ್ಬರು ಪ್ರಯೋಜನ ಪಡೆಯಬೇಕೆಂದರು.
ಗ್ರಾಪಂ. ಅಧ್ಯಕ್ಷೆ ಡಿ.ವಿ.ಗಿರೆಪ್ಪಗೌಡ್ರ, ಉಪಾಧ್ಯಕ್ಷ ಭೀಮಪ್ಪ ಕಮತಗಿ, ಪಿ.ಡಿ.ಓ ಸಿದ್ದಪ್ಪ ಮಳಗಲಿ, ಡಾ. ದೀಪಾ ಹಿರೇಮಠ, ಡಾ. ಆನಂದ ಕನ್ನಿನಾಯ್ಕರ, ಡಾ.ನಾಗರಾಜ ಕಡೆ, ಗ್ರಾ.ಪಂ ಸದಸ್ಯ ನಿಂಗಪ್ಪ ರಾಜಗೋಳಿ, ನಭೀನಾ ನದಾಪ್, ಕಾಶವ್ವಾ ಬೈಲಪ್ಪನವರ, ಸಂಜೀವ ಗಿರೆಪ್ಪಗೌಡರ ಹಾಗೂ ಗ್ರಾ.ಪಂನ ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 