ಬೈಲಹೊಂಗಲ: ಕೂಲಿ ಕಾರ್ಮಿಕರಿಗೆ ಉಚಿತ ತಪಾಸಣಾ ಶಿಬಿರ
ಲೋಕದರ್ಶನ ವರದಿ
ಬೈಲಹೊಂಗಲ 13: ತಾಲೂಕಿನ ಬೈಲವಾಡ ಗ್ರಾ.ಪಂ. ವ್ಯಾಪ್ತಿಯ ಯರಡಾಲ ಗ್ರಾಮದಲ್ಲಿ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮ ಬುಧವಾರ ಏರ್ಪಡಿಸಲಾಗಿತ್ತು.
ತಾಲೂಕಾ ಉದ್ಯೋಗ ಖಾತರಿ ಸಹಾಯಕ ನಿದರ್ೇಶಕ ಸುಭಾಶ ಸಂಪಗಾಂವಿ ಮಾತನಾಡಿ, ಯಾರೂ ಗುಳೆ ಹೋಗದಂತೆ ಗ್ರಾಮೀಣ ಬಡ ಕೂಲಿ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸಕರ್ಾರ ಈ ಉದ್ಯೋಗ ಖಾತ್ರಿ ಯೋಜನೆ ರೂಪಿಸಿದ್ದು ಇದನ್ನು ಸದ್ಭಳಕೆ ಮಾಡಿಕೊಂಡು ಸವಲತ್ತುಗಳನ್ನು ಪಡೆಯಬೇಕೆಂದರು.
ಪಂಚಾಯತ ಅಭಿವೃದ್ದಿ ಅಧಿಕಾರಿ ಬಿ.ಎಲ್.ಬೆಳವಲ್ ಮಾತನಾಡಿ, ಉದ್ಯೋಗ ಖಾತ್ರಿ ಕಾರ್ಯದಲ್ಲಿ ನಿರತರಾಗಿರುವ ಕಾಮರ್ಿಕರಿಗೆ ಉಚಿತ ಆರೋಗ್ಯ ಕಲ್ಪಿಸಲಾಗಿದ್ದು ಪ್ರತಿಯೊಬ್ಬರು ಪ್ರಯೋಜನ ಪಡೆಯಬೇಕೆಂದರು.
ಗ್ರಾಪಂ. ಅಧ್ಯಕ್ಷೆ ಡಿ.ವಿ.ಗಿರೆಪ್ಪಗೌಡ್ರ, ಉಪಾಧ್ಯಕ್ಷ ಭೀಮಪ್ಪ ಕಮತಗಿ, ಪಿ.ಡಿ.ಓ ಸಿದ್ದಪ್ಪ ಮಳಗಲಿ, ಡಾ. ದೀಪಾ ಹಿರೇಮಠ, ಡಾ. ಆನಂದ ಕನ್ನಿನಾಯ್ಕರ, ಡಾ.ನಾಗರಾಜ ಕಡೆ, ಗ್ರಾ.ಪಂ ಸದಸ್ಯ ನಿಂಗಪ್ಪ ರಾಜಗೋಳಿ, ನಭೀನಾ ನದಾಪ್, ಕಾಶವ್ವಾ ಬೈಲಪ್ಪನವರ, ಸಂಜೀವ ಗಿರೆಪ್ಪಗೌಡರ ಹಾಗೂ ಗ್ರಾ.ಪಂನ ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 