ಬೆಂಗಳೂರು 22: ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ 7 ಜೆಡಿಎಸ್ ಮುಖಂಡರು ನಾಪತ್ತೆ, ಇಬ್ಬರ ಸಾವು
ಬೆಂಗಳೂರು 22: ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ 7 ಜನ ಜೆಡಿಎಸ್ ಮುಖಂಡರು , ಬಾಂಬ್ ದಾಳಿ ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಅಡಕಿಮಾರನಹಳ್ಳಿ ಗ್ರಾಮದ ಮಾರೇಗೌಡ, ಹಾರೋಕ್ಯಾತನಹಳ್ಳಿಯ ಪುಟ್ಟರಾಜು, ನೆಲಮಂಗಲ ತಾಲೂಕಿನ ಹೋವೇನಹಳ್ಳಿಯ ಶಿವಣ್ಣ, ಕಾಚನಹಳ್ಳಿ ಗ್ರಾಮದ ಲಕ್ಷ್ಮೀನಾರಾಯಣ, ಬೆಂಗಳೂರು 8ನೇ ಮೈಲಿಯ ಹನುಮಂತರಾಯಪ್ಪ, ದಾಸರಹಳ್ಳಿ ನಿವಾಸಿ ರಂಗಪ್ಪ ಮತ್ತು ತುಮಕೂರಿನ ರಮೇಶ್ ನಾಪತ್ತೆಯಾದವರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವೀರಪ್ಪಮೊಯ್ಲಿ ಪರ ಮತ ಪ್ರಚಾರ ಮುಗಿಸಿದ ಬಳಿಕ ಇವರೆಲ್ಲ ಶ್ರೀಲಂಕಾಗೆ ಪ್ರವಾಸ ಕೈಗೊಂಡಿದ್ದು, ಅಲ್ಲಿಯ ಶಾಂಗ್ರಿಲ್ಲಾ ಹೋಟೆಲ್ನಲ್ಲಿ ತಂಗಿದ್ದರು.
ಆದರೆ, ಶ್ರೀಲಂಕಾದಲ್ಲಿ ನಡೆದ ಭೀಕರ ಬಾಂಬ್ ದಾಳಿ ಬಳಿಕ ಈ ಏಳು ಜನರ ಮೊಬೈಲ್ ಫೋನ್ ಸಂಪರ್ಕಕ್ಕೆ ಸಿಗುತ್ತಿಲ್ಲವಾಗಿದ್ದು, ಕುಟುಂಬಸ್ಥರು ಆತಂಕದಲ್ಲಿದ್ದಾರೆ.
ಬಾಂಬ್ ದಾಳಿಯಲ್ಲಿ ಹನುಮಂತರಾಯಪ್ಪ ಮತ್ತು ರಂಗಪ್ಪ ಎಂಬವರು ಸಾವನ್ನಪ್ಪಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 