ಬಳ್ಳಾರಿ: ಸಿಡಿಪಿಓ ಜಲಾಲಪ್ಪರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಲೋಕದರ್ಶನ ವರದಿ
ಬಳ್ಳಾರಿ 11: ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಸೇರಿದ್ದು ಇವರನ್ನುದ್ದೇಶಿಸಿ ಮಾತನಾಡಿದ ಅಂಗವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಹೆಚ್.ಕೆ.ರಾಮಚಂದ್ರಪ್ಪ ಮಾತನಾಡಿ ಸಿಡಿಪಿಓ ಜಲಾಲಪ್ಪನವರ ಮೇಲೆ ಕ್ರಮ ತೆಗೆದುಕೊಳ್ಳಲು ಮತ್ತು ವಿಚಾರಣೆಗೆ ಆದೇಶಿಸುವ ಕುರಿತು ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚಚರ್ೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳವುದಾಗಿ ಭರವಸೆ ನೀಡಿದರು. ತಿಂಗಳಿಗೊಮ್ಮೆ ಜಿಲ್ಲಾ ಪಂಚಾಯತ್ ಡಿ.ಎಸ್.-2 ಇವರ ಮುಂದಾಳತ್ವದಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಸಮಗ್ರ ಜಾರಿ ಕುರಿತಾದ ಕುಂದುಕೊರತೆಗಳ ಸಭೆ ನಡೆಸಬೇಕೆಂದು ನಿದರ್ೆಶನ ಇದ್ದಾಗಲೂ ಈ ಕುರಿತು ಯಾವುದೇ ಕ್ರಮ ತೆಗೆದುಕೊಂಡಿಲ್ಲವೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಅಂಗನವಾಡಿ ಫೆಡರೇಷನ್ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಮಾತನಾಡಿ ವಿಕೃತ ಮನಸ್ಸಿನ ವ್ಯಕ್ತಿಯಾದ ಜಲಾಲಪ್ಪನವರು ಮಹಿಳೆಯರೇ ತುಂಬಿರುವ ಇಲಾಖೆಯಲ್ಲಿ ಉದ್ಯೋಗ ಮಾಡಲು ಅರ್ಹರಲ್ಲ. ಇಂತಹ ಅಧಿಕಾರಿಯನ್ನು ತೆಗೆದು ಹಾಕುವ ತನಕ ನಮ್ಮ ಹೋರಾಟ ನಿಲ್ಲದು ಎಂದು ಎಚ್ಚರಿಸಿದರು.
ಸಿ.ಇ.ಓ ರಜೆ ಇರುವ ಕಾರಣ ಡಿ.ಎಸ್-2 ಉಮೇಶನಾಯ್ಕ ಇವರು ಮನವಿ ಸ್ವೀಕರಿಸುತ್ತಾ ನಿಮ್ಮ ದೂರಿನ ಕುರಿತು ಸಿ.ಇ.ಓ.ರವರು ಬಂದ ನಂತರ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅದೇರೀತಿ ಕುಂದುಕೊರತೆಗಳ ಸಭೆ ನಡೆಸುವ ಜವಾಬ್ದಾರಿ ನನ್ನದೇ ಇರುವ ಕಾರಣ ಈ ಕುರಿತು ಕೂಡಲೇ ದಿನಾಂಕ ನಿಗದಿಪಡಿಸಿ ಮಾಹಿತಿ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 