ಚಡಚಣ; 16ರಂದು ಚಡಚಣ ಬಂದ್ಗೆ ನಿರ್ಣಯ
ಲೋಕದರ್ಶನ ವರದಿ
ಚಡಚಣ 13: ಸ್ಥಳೀಯ ಜವಳಿ ವ್ಯಾಪಾರಿ ಅಜೀತ ಮುತ್ತಿನ ಅವರ ಮೇಲೆ ಮಾರಣಾಂತಿಕ ಹಲ್ಲೆಗೈದ ಆರೋಪಿಗಳನ್ನು ಬಂಧಿಸುವುದು ಸೇರಿ ಮತ್ತಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮೇ 16 ರಂದು ಚಡಚಣ ಬಂದ್ಗೆ ಕರೆ ನೀಡಲಾಗಿದೆ ಎಂದು ಕರವೇ ವಲಯಾಧ್ಯಕ್ಷ ಸೋಮಶೇಖರ ಬಡಿಗೇರ ಹೇಳಿದರು.
ಪಟ್ಟಣದ ಎಪಿಎಂಸಿ ಆಡಳಿತ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾದ ಬಂದ್ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಗಣ್ಯ ಕಿರಾಣಿ ವ್ಯಾಪಾರಿ ಎಸ್.ಆರ್. ಅವಜಿ ಮಾತನಾಡಿ, ಮೇ 15 ರಂದು ಪಟ್ಟಣದ ವಾರದ ಸಂತೆ ನೆರವೇರಲಿದ್ದು, ಅಂದು ಬಂದ್ ಆಚರಿಸಿದರೆ ಸಾಕಷ್ಟು ಬಡ ಕುಟುಂಬಗಳ ಆಥರ್ಿಕ ಸ್ಥಿತಿಗೆ ತೊಂದರೆ ಉಂಟಾಗುತ್ತದೆ. ಅಲ್ಲದೆ, ಪಟ್ಟಣದ ಇತಿಹಾಸ ಕೆದಕಿದರೆ ಎಂದಿಗೂ ಬುಧವಾರ ಬಂದ್ ಆಚರಿಸಿಲ್ಲ. ಮೇ 16 ರಂದು ಇಡೀ ದಿನ ಬಂದ್ ಆಚರಿಸಲು ಸವರ್ಾನುಮತದಿಂದ ತೀರ್ಮಾನಿಸಲಾಯಿತು
ಅಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಬಂದ್ ಆಚರಿಸಲು ನಿರ್ಧರಿಸಲಾಗಿದ್ದು, ತುತರ್ು ಸೇವೆಗಳಾದ ಆಸ್ಪತ್ರೆ, ಔಷಧ ಅಂಗಡಿ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳು, ಬಸ್, ಆಟೋ, ಮ್ಯಾಕ್ಸಿಕ್ಯಾಬ್, ಸಿನಿಮಾ ಮಂದಿರ ಸೇರಿ ಎಲ್ಲ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ, ಪ್ರತಿಯೊಬ್ಬರೂ ಪಾಲ್ಗೊಂಡು ಬಂದ್ ಯಶಸ್ವಿಗೊಳಿಸಬೇಕು.
ಕಿರಾಣಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜಿ.ಡಿ. ಪಾವಲೆ, ಸರಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ಎಸ್. ಬಿರಾದಾರ, ಗಣ್ಯ ವರ್ತಕರಾದ ರಾಜೇಂದ್ರ ಮುತ್ತೀನ, ರವಿ ಪಾವಲೆ, ಮಹಾದೇವ ಯಂಕಂಚಿ, ಸಂತೋಷ ವನಕುದರೆ, ಉದಯ ಅವಟಿ, ಎಪಿಎಂಸಿ ನಿದರ್ೆಶಕ ಬಾಬು ಚವಾಣ್, ಪಪಂ ಮಾಜಿ ಸದಸ್ಯ ರಾಜು ಕೋಳಿ, ಸಂಘಟನೆಗಳ ಮುಖಂಡರಾದ ಪ್ರಭಾಕರ ನಿರಾಳೆ, ಮಹಾದೇವ ಬನಸೋಡೆ, ದಶರಥ ಬನಸೋಡೆ, ಚೇತನ ಮಠ, ಶಕೀಲ ಖಾಟಿಕ, ರಾಹುಲ ಲೋಖಂಡೆ, ವಿಕಾಸ ಮಲ್ಲಾಡಿ, ನಾಗೇಶ ಗಾಯಕವಾಡ ಸೇರಿ ಮತ್ತಿತರರಿದ್ದರು.
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ 