ಚೈನಾಮನ್ ಕುಲ್ದೀಪ್ ಯಾದವ್ ಸ್ಪಿನ್ ಮೋಡಿ ಮಾಡಲಿಲ್ಲ: ಕೊಹ್ಲಿ
ಕಾಡರ್ಿಫ್ 07: ಮೊದಲ ಟಿ20 ಪಂದ್ಯದಲ್ಲಿ ಆಂಗ್ಲರ ವಿರುದ್ಧ 5 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಕುಲ್ದೀಪ್ ಯಾದವ್ ಸ್ಪಿನ್ ಎರಡನೇ ಪಂದ್ಯದಲ್ಲಿ ಮೋಡಿ ಮಾಡಲಿಲ್ಲ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕುಲ್ದೀಪ್ ಯಾದವ್ ಬೌಲಿಂಗ್ ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳು ಎಚ್ಚರಿಕೆಯಿಂದ ಆಡಿದ್ದರಿಂದ ಪಂದ್ಯದ ಫಲಿತಾಂಶ ಬದಲಾಯಿತು. ಕುಲ್ದೀಪ್ ಬೌಲಿಂಗ್ ಎದುರಿಸಲು ಇಂಗ್ಲೆಂಡ್ ಬ್ಯಾಟ್ಸ್ ಮನ್ಗಳು ತೀವ್ರ ಕಸರತ್ತು ನಡೆಸಿದ್ದರು ಎಂದು ಕೊಹ್ಲಿ ಹೇಳಿದ್ದಾರೆ.
ಕುಲ್ದೀಪ್ ಯಾದವ್ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದರು. ಅದನ್ನು ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳು ರಕ್ಷಣಾತ್ಮಕವಾಗಿ ಆಡಿದರು. ಇದು ಆಂಗ್ಲರಿಗೆ ಪಂದ್ಯ ಗೆಲ್ಲಲು ಸಾಧ್ಯವಾಯಿತು ಎಂದರು.
ಇನ್ನು ಆರಂಭಿಕ ಆಟಗಾರರ ವೈಫಲ್ಯ ಸಹ ತಂಡ ಕಡಿಮೆ ಮೊತ್ತ ಪೇರಿಸಲು ಕಾರಣವಾಯಿತು. ರೋಹಿತ್ ಶಮರ್ಾ 5, ಶಿಖರ್ ಧವನ್ 10 ಮತ್ತು ಕೆಎಲ್ ರಾಹುಲ್ 6 ರನ್ ಸಿಡಿಸಿ ಪೆವಿಲಿಯನ್ ಸೇರಿದ್ದರು. ಈ ಎಲ್ಲಾ ಕಾರಣಗಳು ತಂಡ ಪಂದ್ಯವನ್ನು ಸೋಲಲು ಕಾರಣವಾಯಿತು ಎಂದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಅಲ್ಪಮೊತ್ತ ಪೇರಿಸಿತು. 149 ರನ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಇನ್ನು 2 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 