ಕಾಂಗ್ರೆಸ್ ರೈತರನ್ನು ವಂಚಿಸಿದೆ: ಮೋದಿ
ಅಮೃತಸರ 11: ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಗೆ ಈಗ ನಿದ್ದೆ ಬರುತ್ತಿಲ್ಲ, ಕಾರಣ ದೇಶದ ರೈತರು ನೆಮ್ಮದಿಯ ನಿದ್ದೆ ಮಾಡುವಂತಾಗಿದೆ. ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ರೈತರಿಗೆ ಪೊಳ್ಳು ಭರವಸೆಗಳನ್ನು ನೀಡಿ ವೋಟ್ ಬ್ಯಾಂಕ್ ಮಾಡಿಕೊಂಡಿತ್ತು, ಆದರೆ ಈಗ ಕಾಲ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಜಾಬ್ನ ಮುಕ್ಅಸಾರ್ ನಲ್ಲಿ ಎನ್ಡಿಎ ಅಂಗಪಕ್ಷ ಶಿರೋಮಣಿ ಆಕಾಲಿ ದಳ ಬುಧವಾರ ಆಯೋಜಿಸಿದ್ದ ಕಿಸಾನ್ ಕಲ್ಯಾಣ್ ಬೃಹತ್ ಸಮಾವೇಶದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು.
ಕೇಂದ್ರ ಸಕರ್ಾರ 14 ಮಂಗಾರು ಬೆಳೆಗಳಿ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ್ದುದಕ್ಕಾಗಿ ಪ್ರಧಾನಿ ಅವರನ್ನು ಸಮಾರಂಭದಲ್ಲಿ ಅಭಿನಂದಿಸಲಾಯಿತು.
ಕೃಷಿ ಉತ್ಪನ್ನಗಳನ್ನು ದಾಖಲೆ ಸಂಖ್ಯೆಯಲ್ಲಿ ಉತ್ಪಾದಿಸಿ ನೀಡಿದ ರೈತರಿಗೆ ನಾನು ಶಿರಬಾಗಿ ನಮಿಸುತ್ತೇನೆ. ಅವರ ಕಠಿಣ ಶ್ರಮಕ್ಕೆ ನಾನು ಗೌರವ ನೀಡುತ್ತೇನೆ. ಕೊಟ್ಟ ಮಾತಿನಂತೆ 2020 ರ ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇನೆ ಎಂದರು.
ರೈತರು ಕಾಂಗ್ರೆಸ್ ಮೇಲೆ ವಿಶ್ವಾಸವಿರಿಸಿದ್ದರು ಆದರೆ ಅವರ ಶ್ರಮಕ್ಕೆ ಕಾಂಗ್ರೆಸ್ ಬೆಲೆ ಕೊಟ್ಟಿಲ್ಲ. ರೈತರನ್ನು ವೋಟ್ ಬ್ಯಾಂಕ್ ಆಗಿ ಮಾತ್ರ ನೋಡಿ ಕೊಂಡಿತ್ತು, ಆದರೆ ಈಗಿನ ಕೇಂದ್ರ ಸಕರ್ಾರ ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದರು.
ರಾಜ್ಯದ ರೈತರು ಪಂಜಾಬನ್ನು ಭಾರತದ ಕೃಷಿ ಶಕ್ತಿಯನ್ನಾಗಿ ರೂಪಿಸಿದ್ದಾರೆ ಇದಕ್ಕಾಗಿ ಅಭಿನಂದನೆಗಳು ಎಂದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 