ಪರಿಕ್ಕರ್ ಸಿಎಂ ಸ್ಥಾನ ತ್ಯಜಿಸಲು ಕಾಂಗ್ರೆಸ್ ಆಗ್ರಹ
ಪಣಜಿ, ನ.21- ತೀವ್ರ ಅಸ್ವಸ್ಥರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕೂಡಲೇ ಸಿಎಂ ಸ್ಥಾನದಿಂದ 48 ಗಂಟೆಗಳೊಳಗೆ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಗೋವಾದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ಆರಂಭವಾಗಿದ್ದು, ತೀವ್ರ ಅನಾರೋಗ್ಯದ ಹೊರತಾಗಿಯೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿರುವ ಮನೋಹರ ಪರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ನೂರಾರು ಮಂದಿ ಮುಖ್ಯಮಂತ್ರಿಗಳ ಖಾಸಗಿ ನಿವಾಸಕ್ಕೆ ಪಾದಯಾತ್ರೆ ನಡೆಸಿದರು. ಪರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಅವರ ಸ್ಥಾನದಲ್ಲಿ ಪೂಣರ್ಾವಧಿ ಮುಖ್ಯಮಂತ್ರಿ ಬೇಕು ಎಂದು ಆಗ್ರಹಿಸಿದ್ದಾರೆ.
ಆಡಳಿತದ ಪುನಃ ಪ್ರತಿಷ್ಠಾಪನೆಗಾಗಿ ಜನರ ಪಾದಯಾತ್ರೆ ಎಂಬ ಘೋಷವಾಕ್ಯದೊಂದಿಗೆ ಸುಮಾರು ಒಂದು ಕಿಲೋ ಮೀಟರ್ ಪಾದಯಾತ್ರೆ ನಡೆಸಿ, ಪರಿಕ್ಕರ್ ರಾಜೀನಾಮೆಗೆ 48 ಗಂಟೆಗಳ ಗಡುವು ನೀಡಲಾಗಿದೆ. ಈ ಪಾದಯಾತ್ರೆಗೆ ಕಾಂಗ್ರೆಸ್ ಹೊರತುಪಡಿಸಿ, ಎನ್ಸಿಪಿ ಹಾಗೂ ಶಿವಸೇನೆ ಕೂಡಾ ಬೆಂಬಲ ಸೂಚಿಸಿದ್ದು, ಸಾಮಾಜಿಕ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ಪಾದಯಾತ್ರೆ ಆಯೋಜಿಸಿದ್ದವು.
ಪರಿಕ್ಕರ್ ತೀವ್ರ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಒಂಬತ್ತು ತಿಂಗಳಿಂದ ಪರಿಕ್ಕರ್ ಅಸ್ವಸ್ಥರಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಡೀ ರಾಜ್ಯದ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ಹೇಳಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 