ಪರಿಕ್ಕರ್ ಸಿಎಂ ಸ್ಥಾನ ತ್ಯಜಿಸಲು ಕಾಂಗ್ರೆಸ್ ಆಗ್ರಹ
ಪಣಜಿ, ನ.21- ತೀವ್ರ ಅಸ್ವಸ್ಥರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕೂಡಲೇ ಸಿಎಂ ಸ್ಥಾನದಿಂದ 48 ಗಂಟೆಗಳೊಳಗೆ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಗೋವಾದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ಆರಂಭವಾಗಿದ್ದು, ತೀವ್ರ ಅನಾರೋಗ್ಯದ ಹೊರತಾಗಿಯೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿರುವ ಮನೋಹರ ಪರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ನೂರಾರು ಮಂದಿ ಮುಖ್ಯಮಂತ್ರಿಗಳ ಖಾಸಗಿ ನಿವಾಸಕ್ಕೆ ಪಾದಯಾತ್ರೆ ನಡೆಸಿದರು. ಪರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಅವರ ಸ್ಥಾನದಲ್ಲಿ ಪೂಣರ್ಾವಧಿ ಮುಖ್ಯಮಂತ್ರಿ ಬೇಕು ಎಂದು ಆಗ್ರಹಿಸಿದ್ದಾರೆ.
ಆಡಳಿತದ ಪುನಃ ಪ್ರತಿಷ್ಠಾಪನೆಗಾಗಿ ಜನರ ಪಾದಯಾತ್ರೆ ಎಂಬ ಘೋಷವಾಕ್ಯದೊಂದಿಗೆ ಸುಮಾರು ಒಂದು ಕಿಲೋ ಮೀಟರ್ ಪಾದಯಾತ್ರೆ ನಡೆಸಿ, ಪರಿಕ್ಕರ್ ರಾಜೀನಾಮೆಗೆ 48 ಗಂಟೆಗಳ ಗಡುವು ನೀಡಲಾಗಿದೆ. ಈ ಪಾದಯಾತ್ರೆಗೆ ಕಾಂಗ್ರೆಸ್ ಹೊರತುಪಡಿಸಿ, ಎನ್ಸಿಪಿ ಹಾಗೂ ಶಿವಸೇನೆ ಕೂಡಾ ಬೆಂಬಲ ಸೂಚಿಸಿದ್ದು, ಸಾಮಾಜಿಕ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ಪಾದಯಾತ್ರೆ ಆಯೋಜಿಸಿದ್ದವು.
ಪರಿಕ್ಕರ್ ತೀವ್ರ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಒಂಬತ್ತು ತಿಂಗಳಿಂದ ಪರಿಕ್ಕರ್ ಅಸ್ವಸ್ಥರಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಡೀ ರಾಜ್ಯದ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 