ಬೇರೆ ದೇಶಗಳಲ್ಲಿ ಶಾಲೆ ಆರಂಭಿಸಿದ ನಂತರ ಸೋಂಕು ಹೆಚ್ಚಾಗಿದೆ :ಸಿದ್ದರಾಮಯ್ಯ
ಬೆಂಗಳೂರು,ಜೂ.4,ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ಕೋವಿಡ್ 19 ಸೋಂಕು ಹೆಚ್ಚಾಗಿದ್ದು, ಇದೀಗ ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಸರ್ಕಾರ ಯೋಚನೆ ಮಾಡುವುದು ಸೂಕ್ತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ವರದಿಯಾಗುತ್ತಿವೆ. ಹೀಗಾಗಿ ಸೋಂಕು ಹೆಚ್ಚುತ್ತಿರುವ ಈಗಿನ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.ಶಾಲೆಗಳನ್ನು ಜುಲೈ ತಿಂಗಳಲ್ಲಿ ಪುನರಾರಂಭಿಸುವ ಪ್ರಸ್ತಾವವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಂದಿಟ್ಟಿದ್ದಾರೆ. ಇದರಿಂದ ಪೋಷಕರು ಆತಂಕಕ್ಕೊಳಗಾಗಿದ್ದು, ಸಚಿವರ ಪ್ರಸ್ತಾವವನ್ನು ವಿರೋಧಿಸುತ್ತಿದ್ದಾರೆ. ಸರ್ಕಾರ ಪೋಷಕರ ಆತಂಕ ಮತ್ತು ವಿರೋಧವನ್ನು ಗಮನಿಸಬೇಕು ಎಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕ್ರಮಗಳನ್ನು ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ. ಶಾಲೆಗಳ ಆರಂಭಕ್ಕೆ ಸರ್ಕಾರ ಅವಸರದ ತೀರ್ಮಾನ ಮಾಡಬಾರದು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 