ಯುವ ಪ್ರತಿಭೆಗೆ ಜಿಲ್ಲಾಧಿಕಾರಿಗಳ ಮೆಚ್ಚುಗೆ
ಧಾರವಾಡ 18: ಇತ್ತೀಚೆಗೆ ಬೆಂಗಳೂರಿನಲ್ಲಿ ರಾಮನ್ ಸಂಶೋಧನಾ ಸಂಸ್ಥೆ ಏರ್ಪಡಿಸಿದ್ದ ರಾಮನ್ ಯುವ ವಿಜ್ಞಾನಿ ಅನ್ವೇಷಣಾ ಸ್ಪಧರ್ೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿರುವ ತಾಲೂಕಿನ ಬೋಗೂರ ಗ್ರಾಮದ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾಥರ್ಿನಿ ಸುಮಾ ತುರಮುರಿ ಅವರ ಪ್ರತಿಭೆಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಮೆಚ್ಚುಗೆ ಸೂಚಿಸಿ ಗೌರವಿಸಿದ್ದಾರೆ.
ಈ ಸ್ಪಧರ್ೆಗೆ 1560 ಶಾಲೆಗಳು ನೊಂದಾಯಿಸಿಕೊಂಡಿದ್ದವು. 130 ಶಾಲೆಗಳು ಅರ್ಹತೆ ಪಡೆದಿದ್ದವು. ಇವುಗಳ ಪೈಕಿ ಬೋಗೂರಿನ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಸಕರ್ಾರಿ ಸಂಸ್ಥೆಯಾಗಿದ್ದು ವಿಶೇಷ. ಉಳಿದ ಎಲ್ಲ ಶಾಲೆಗಳು ಖಾಸಗಿ ಸಂಸ್ಥೆಗಳಾಗಿದ್ದವು.
ಸುಮಾ ತುರಮುರಿ ಅವರು ನಿಮರ್ಿಸಿದ ಹೃದಯದ ಮಾದರಿಯು ಪ್ರಥಮ ಬಹುಮಾನ ಪಡೆಯಿತು. ರೂ.20,000/- ನಗದು, ವಿಜ್ಞಾನ ಉಪಕರಣಗಳು, ವಿದ್ಯಾಲೋಕ ಸಂಸ್ಥೆಯಿಂದ ಲ್ಯಾಪ್ಟಾಪ್ ನೀಡಲಾಯಿತು. ಬೋಗೂರು ಸಕರ್ಾರಿ ಶಾಲೆಯಲ್ಲಿ ವಿದ್ಯಾಪೋಷಕ ಸಂಸ್ಥೆಯು ವಿದ್ಯಾಲೋಕ ಆನ್ಲೈನ್ ತರಗತಿಗಳನ್ನು ನಡೆಸುತ್ತಿರುವುದು ವಿದ್ಯಾಥರ್ಿಗಳ ಶಿಕ್ಷಣಕ್ಕೆ ಸಹಕಾರಿಯಾಗಿದೆ.
ಜಿಲ್ಲಾಧಿಕಾರಿಗಳು ವಿದ್ಯಾಥರ್ಿನಿಗೆ ಪುರಸ್ಕರಿಸಿದ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಬಿ.ಎಸ್. ಪಾಟೀಲ, ವಿದ್ಯಾಲೋಕ ಜಿಲ್ಲಾ ಸಂಯೋಜಕ ಶ್ರೀಪತಿ ಕೋಲ್ಹಾರ, ಸಹ ಸಂಯೋಜಕ ಮಲ್ಲಿಕಾಜರ್ುನ ಬಿಜಾಪೂರ ಮತ್ತಿತರರು ಇದ್ದರು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 