ಶೀಘ್ರ ತುಂಗಭದ್ರಾ ನದಿಯಿಂದ ನಗರಕ್ಕೆ ನೀರು: ಜಿಲ್ಲಾಧಿಕಾರಿ
ಹಾವೇರಿ27: ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು ಹರಿಬಿಡಲಾಗಿದ್ದು, ಈಗಾಗಲೇ ರಾಣೇಬೆನ್ನೂರ ಗುತ್ತಲ ಭಾಗದ ಸಮೀಪ ನೀರು ಬಂದಿದೆ. ಶೀಘ್ರವೇ ಹಾವೇರಿ ನಗರ ಹಾಗೂ ರಾಣೇಬೆನ್ನೂರ ನಗರಕ್ಕೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಾಧ್ಯಮಗೋಷ್ಠಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮಾಹಿತಿ ನೀಡಿದ ಅವರು, ರಾಣೇಬೆನ್ನೂರ ಹಾಗೂ ಗುತ್ತಲ ಪಂಪ್ಹೌಸ್ನಿಂದ ನೀರು ಪಂಪಿಂಗ್ ಆರಂಭಿಸಲಾಗಿದೆ. ಬುಧವಾರ ಅಥವಾ ಗುರುವಾರ ಹಾವೇರಿ ನಗರಕ್ಕೆ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಹಾವೇರಿ ನಗರದ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಟಾಸ್ಕಪೋಸರ್್ ಹಾಗೂ ನಗರಸಭೆ ವತಿಯಿಂದ ಕೊರೆಸಲಾದ ಕೊಳವೆಬಾವಿಗಳಿಂದ ಓವರ್ ಟ್ಯಾಂಕ್ಗೆ ಸಂಪರ್ಕ ಕಲ್ಪಿಸುವ ಕುರಿತಂತೆ ಯೋಜನೆಯೊಂದನ್ನು ರೂಪಿಸಲಾಗುವುದು. ನಗರದಲ್ಲಿ 280ಕ್ಕೂ ಹೆಚ್ಚು ಕೊಳವೆಬಾವಿಗಳಿವೆ ಎಂದು ವಿವರಿಸಿದರು.
ಜಿಲ್ಲೆಯ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ 165 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಈ ಪೈಕಿ ಈಗಾಗಲೇ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಗ್ರಾಮಗಳಿಗೆ 86 ಖಾಸಗಿ ಬೋರವೆಲ್ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಈವರೆಗೆ ಟ್ಯಾಂಕರ್ ಮೂಲಕ ಯಾವ ಗ್ರಾಮಗಳಿಗೂ ನೀರು ಪೂರೈಸಿರುವುದಿಲ್ಲ. ಆದರೆ ಬ್ಯಾಡಗಿ ತಾಲೂಕು ಶಿಡೇನೂರ ಗ್ರಾಮಕ್ಕೆ ಖಾಸಗಿ ಕೊಳವೆಬಾವಿಯ ತಾಂತ್ರಿಕ ಸಮಸ್ಯೆಯಿಂದ ತಾತ್ಕಾಲಿಕವಾಗಿ ಒಂದು ವಾರ ಟ್ಯಾಂಕರ್ ಬಳಸಲಾಗಿದೆ. ಈಗ ಟ್ಯಾಂಕರ್ ಸರಬರಾಜು ನಿಲ್ಲಿಸಲಾಗಿದೆ ಎಂದು ವಿವರಿಸಿದರು.
ಎಪ್ರಿಲ್ ಮೇ ಮಾಹೆಯಲ್ಲಿ ಉಳಿದ 125 ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ನಿರೀಕ್ಷಿಸಲಾಗಿದೆ. ಈಗಾಗಲೇ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ವಿಭಾಗದಿಂದ ಹಾಗೂ ಟಾಸ್ಕಪೋಸರ್್ ವತಿಯಿಂದ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದೆ. ಸಕಾಲಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲಾಗುತ್ತಿದೆ. ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಅವರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 