ಬ್ರಾಹ್ಮಣ ಯುವತಿ ಜೊತೆ ರಾಹುಲ್ ವಿವಾಹ ಮಾಡಿಸುವಂತೆ ಸೋನಿಯಾಗೆ ಹೇಳಿದ್ದೆ - ದಿವಾಕರ್ ರೆಡ್ಡಿ
ಲೋಕದರ್ಶನ ವರದಿ
ನವದೆಹಲಿ, ಜು.06 (ಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿವಾಹದ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚಚರ್ೆಯಾಗಿರುವ ವಿಷಯ. ಇದೇ ವಿಷಯದ ಬಗ್ಗೆ ರಾಹುಲ್ ಗಾಂಧಿ ಕುಟುಂಬದ ಹಿತೈಸಿ, ಮಾಜಿ ಕಾಂಗ್ರೆಸ್ಸಿಗ, ಹಾಲಿ ಟಿಡಿಪಿ ಸಂಸದ ಜೆಸಿ ದಿವಾಕರ್ ರೆಡ್ಡಿ ಈಗ ಮತ್ತೊಮ್ಮೆ ಮಾತನಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಜಕಾರಣದ ಮೇಲೆ ಹಿಡಿತ ಸಾಧಿಸಬೇಕಾದರೆ ಬ್ರಾಹ್ಮಣ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಓರ್ವ ಉತ್ತಮ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸೋನಿಯಾ ಗಾಂಧಿಗೆ ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ನನ್ನ ಸಲಹೆಯನ್ನು ಕೇಳಲಿಲ್ಲ ಎಂದು ಜೆಸಿ ದಿವಾಕರ ರೆಡ್ಡಿ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯದ ಬೆಂಬಲ ಅಗತ್ಯವಿದೆ, ಈಹಿನ್ನೆಲೆಯಲ್ಲಿ ರಾಹುಲ್ ಗೆ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸಲಹೆ ನೀಡಿದ್ದಾಗಿ ರೆಡ್ದಿ ಹೇಳಿದ್ದಾರೆ. ರಾಹುಲ್ ಗಾಂಧಿ ಹಾಗೂ ರಾಯ್ ಬರೇಲಿ ಕ್ಷೇತ್ರದ ಶಾಸಕಿ ಅದಿತಿ ಸಿಂಗ್ ವಿವಾಹದ ಕುರಿತು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು, ಆದರೆ ಸ್ವತಃ ಅದಿತಿ ಈ ಬಗ್ಗೆ ಸ್ಪಷ್ಟನೆ ನೀಡಿ ರಾಹುಲ್ ತನ್ನ ಸಹೋದರನಿದ್ದಂತೆ ಎಂದು ವದಂತಿಗಳಿಗೆ ತೆರೆ ಎಳೆದಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 