ಬ್ರಾಹ್ಮಣ ಯುವತಿ ಜೊತೆ ರಾಹುಲ್ ವಿವಾಹ ಮಾಡಿಸುವಂತೆ ಸೋನಿಯಾಗೆ ಹೇಳಿದ್ದೆ - ದಿವಾಕರ್ ರೆಡ್ಡಿ
ಲೋಕದರ್ಶನ ವರದಿ
ನವದೆಹಲಿ, ಜು.06 (ಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿವಾಹದ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚಚರ್ೆಯಾಗಿರುವ ವಿಷಯ. ಇದೇ ವಿಷಯದ ಬಗ್ಗೆ ರಾಹುಲ್ ಗಾಂಧಿ ಕುಟುಂಬದ ಹಿತೈಸಿ, ಮಾಜಿ ಕಾಂಗ್ರೆಸ್ಸಿಗ, ಹಾಲಿ ಟಿಡಿಪಿ ಸಂಸದ ಜೆಸಿ ದಿವಾಕರ್ ರೆಡ್ಡಿ ಈಗ ಮತ್ತೊಮ್ಮೆ ಮಾತನಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಜಕಾರಣದ ಮೇಲೆ ಹಿಡಿತ ಸಾಧಿಸಬೇಕಾದರೆ ಬ್ರಾಹ್ಮಣ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಓರ್ವ ಉತ್ತಮ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸೋನಿಯಾ ಗಾಂಧಿಗೆ ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ನನ್ನ ಸಲಹೆಯನ್ನು ಕೇಳಲಿಲ್ಲ ಎಂದು ಜೆಸಿ ದಿವಾಕರ ರೆಡ್ಡಿ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯದ ಬೆಂಬಲ ಅಗತ್ಯವಿದೆ, ಈಹಿನ್ನೆಲೆಯಲ್ಲಿ ರಾಹುಲ್ ಗೆ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸಲಹೆ ನೀಡಿದ್ದಾಗಿ ರೆಡ್ದಿ ಹೇಳಿದ್ದಾರೆ. ರಾಹುಲ್ ಗಾಂಧಿ ಹಾಗೂ ರಾಯ್ ಬರೇಲಿ ಕ್ಷೇತ್ರದ ಶಾಸಕಿ ಅದಿತಿ ಸಿಂಗ್ ವಿವಾಹದ ಕುರಿತು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು, ಆದರೆ ಸ್ವತಃ ಅದಿತಿ ಈ ಬಗ್ಗೆ ಸ್ಪಷ್ಟನೆ ನೀಡಿ ರಾಹುಲ್ ತನ್ನ ಸಹೋದರನಿದ್ದಂತೆ ಎಂದು ವದಂತಿಗಳಿಗೆ ತೆರೆ ಎಳೆದಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 