ಡ್ರೈವಿಂಗ್ ಮಾಡೋವಾಗ ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಚಾಲಕನ ಪರವಾನಗಿ ರದ್ದು
ಮುಂಬೈ,ನ.20-- ಡ್ರೈವಿಂಗ್ ಮಾಡೋವಾಗ ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಮೂರು ತಿಂಗಳ ಕಾಲ ಪರವಾನಗಿ ರದ್ದು ಮಾಡಲು ಮಹಾರಾಷ್ಟ್ರ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.
ಸರಕಾರ ಕಳೆದ ಮೂರು ವರ್ಷದ ಹಿಂದೆ ಹೊರಡಿಸಿರುವ ನಿರ್ಣಯವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ತಮ್ಮ ಎಲ್ಲ ಶಾಖೆಗಳಿಗೆ, ಇಲಾಖೆ ಸುತ್ತೋಲೆ ಕಳುಹಿಸಿದೆ.
ಸಂಚಾರ ಅಪರಾಧಿಗಳ ಚಾಲನ ಪರವಾನಗಿ ರದ್ದು ಮಾಡಲು ಪೊಲೀಸ್ ಇಲಾಖೆ ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್ಟಿಒ) ಅನುಮತಿ ಪಡೆದು, ಸರಕಾರಿ ನಿರ್ಣಯದಲ್ಲಿ ಉಲ್ಲೇಖಿಸಲಾಗಿರುವ ಆರು ವಿಧದ ನಿಯಮ ಉಲ್ಲಂಘನೆಗಳಿಗಾಗಿ ಕನಿಷ್ಟ ಮೂರು ತಿಂಗಳ ಕಾಲ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಅಧಿಕಾರವಿದೆ.
ಪುಣೆ-ಮುಂಬೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ Ùಳಶೂನ್ಯ ಸಹನೆÙಳ ಕಾಯರ್ಾಚರಣೆಯನ್ನು ಆರಂಭಿಸಲಾಗಿದ್ದು ಮತ್ತು ಶೀಘ್ರದಲ್ಲೇ ಇದು ಇತರ ಹೆದ್ದಾರಿಗಳಲ್ಲಿಯೂ ಸಹ ಪ್ರಾರಂಭವಾಗಲಿದೆ.
ವೇಗದ ಚಾಲನೆ, ಕುಡಿದು ಚಾಲನೆ, ಸಿಗ್ನಲ್ ಜಂಪ್ ಮಾಡುವುದು, ಡ್ರೈವ್ ಮಾಡುವಾಗ ಮೊಬೈಲ್ ಸಂಭಾಷಣೆ, ವಾಣಿಜ್ಯೋದ್ದೇಶದ ವಾಹನಗಳಲ್ಲಿ ಪ್ರಯಾಣಿಕರ ಸಾಗಣೆ ಮತ್ತು ಓವರ್ ಲೋಡಿಂಗ್- ಈ 6 ಕಾರಣಗಳಿಗೆ ಲೈಸೆನ್ಸ್ ರದ್ದು ಮಾಡಲು ಆರ್ಟಿಒಗೆ ಅಧಿಕಾರವಿದೆ.
ಹೆಚ್ಚಿನ ಮೊತ್ತದ ದಂಡ ವಿಧಿಸಿದರೂ ಅಪರಾಧಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ . ಮೂರು ತಿಂಗಳ ಕಾಲ ತನ್ನ ವಾಹನಾ ಚಾಲನಾ ಪರವಾನಗಿಯನ್ನು ನಿಷೇಧಿಸಿದರೆ ಅದರಿಂದ ತಕ್ಕ ಪಾಠ ಕಲಿಯುತ್ತಾರೆ ಎಂದು ಹೆದ್ದಾರಿ ಎಸ್ಪಿ ವಿಜಯ್ ಪಾಟೀಲ್ ಅಭಿಪ್ರಾಯ ಪಡುತ್ತಾರೆ.
ಕಳೆದ ವರ್ಷ ಮಹಾರಾಷ್ಟ್ರದಲ್ಲಿ 35,800 ಕ್ಕೂ ಹೆಚ್ಚು ರಸ್ತೆ ಅಪಘಾತಗಳು ವರದಿಯಾಗಿವೆ. ಪರಿಣಾಮವಾಗಿ 12,200 ಕ್ಕೂ ಅಧಿಕ ಸಾವುಗಳು ಸಂಭವಿಸಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸುಪ್ರೀಂ ಕೋಟರ್್ ನೇಮಿಸಿದ ಸಮಿತಿಯು ರಸ್ತೆ ಅಪಘಾತ ಮತ್ತು ಸಾವುಗಳನ್ನು 10% ರಷ್ಟು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 