ಗುಳೇದಗುಡ್ಡ: ಮೃತರ ಕುಟುಂಬಕ್ಕೆ ಪರಿಹಾರ ಧನ ವಿತರಣೆ
ಲೋಕದರ್ಶನ ವರದಿ
ಗುಳೇದಗುಡ್ಡ 22: ಮುದ್ದೇಬಿಹಾಳ ತಾಲೂಕಿನ ಕಂದಗನೂರ ಗ್ರಾಮದ ಬಳಿ ವಾಹನ ಅಪಘಾತದಲ್ಲಿ ಮೃತಪಟ್ಟ ಹಳದೂರ ಗ್ರಾಮದ ಮೂವರು ಕುಟುಂಬದ ಸದಸ್ಯರಿಗೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ಸಿದ್ದರಾಮಯ್ಯ ಅವರು ನೀಡಿದ್ದ ತಲಾ 1 ಲಕ್ಷ ರೂ.ಗನ್ನು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಬಿ. ಸೌದಾಗರ ಮಂಗಳವಾರ ವಿತರಿಸಿದರು.
ಗ್ರಾಮಕ್ಕೆ ಭೇಟಿ ನೀಡಿದ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೌದಾಗಾರ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪರಿಹಾರಧನದ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜು ಜವಳಿ, ಮಲ್ಲಣ್ಣ ಯಲಿಗಾರ, ಜಿಪಂ ಮಾಜಿ ಸದಸ್ಯ ಎಂ.ಬಿ. ಹಂಗರಗಿ, ರಾಜು ಚಮ್ಮನಕಟ್ಟಿ, ಚಿದಾನಂದಸಾ ಕಾಟವಾ, ಜಿ.ಎಂ. ಸಿಂಧೂರ, ಅನೀಲಕುಮಾರ ದಡ್ಡಿ, ಜಮೀರ ಮೌಲ್ವಿ, ಗ್ರಾಪಂ ಸದಸ್ಯರಾದ ವೀರಬಸಪ್ಪ ಹುನಗುಂದ, ದೇವರಾಯಪ್ಪ ಮೂಲಿಮನಿ, ಪರಶುರಾಮ ಮಾದರ, ಎನ್.ಎಸ್. ರಾಂಪುರ, ನಿವೃತ್ತ ಡಿಡಿಪಿಐ ಎ.ಎಂ. ಮಡಿವಾಳರ, ಚನ್ನವೀರ ಅಂಗಡಿ, ಮಂಜುನಾಥ ಪುರ್ತಗೇರಿ, ಚನ್ನಪ್ಪ ಮೇಟಿ, ನಾಗಪ್ಪ ಕೆಂದೂರ, ಗುರಯ್ಯ ಹಿರೇಮಠ ಇತರರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 